12:37 PM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಪ್ಯಾರಿಷ್ ಚಾರಿಟಿ ಟ್ರೋಫಿ 2025: ಪಾಲಡ್ಕಾ ವಿನ್ನರ್, ಪೆರ್ಮನೂರ್ ರನ್ನರ್

07/04/2025, 23:22

ಮಂಗಳೂರು(reporterkarnataka.com): ರಾಣಿಪುರ ವೆಲ್ಫೇರ್ ಅಸೋಸಿಯೇಷನ್ ಮುಂದಾಳತ್ವದಲ್ಲಿ ,ದೇರಳಕಟ್ಟೆ ಫಾದರ್ ಮುಲ್ಲರ್ ಹೋಮಿಯೋಪತಿ ಮೈದಾನದಲ್ಲಿ ನಡೆದ ಇಂಟರ್ ಪ್ಯಾರಿಷ್ ಚ್ಯಾರಿಟಿ ಟ್ರೋಫಿ ಕ್ರಿಕೆಟ್ ಪಂದ್ಯಾಟಗಳಲ್ಲಿ ಸೇಂಟ್ ಲೋಯೋಲಾ ಚರ್ಚ ಪಾಲಡ್ಕಾ ವಿನ್ನರ್ ಆಗಿದ್ದು, ಸೇಂಟ್ ಸೆಬೆಸ್ಟಿಯನ್ ಚರ್ಚ್ ಪೆರ್ಮನೂರ್ ರನ್ನರ್ ಪಟ್ಟವನ್ನು ಅಲಂಕರಿಸಿದೆ.


ತಾರೀಕು 5 ಮತ್ತು 6 ರಂದು ಎರಡು ದಿನಗಳ ಕಾಲ ಕ್ರಿಕೆಟ್ ಪಂದ್ಯಾಟವು ನಡೆಯಿತು, ಬಡಬಗ್ಗರ ದೀನ ದಲಿತರಿಗೆ ಹಾಗೂ ವಿವಿಧ ರೋಗಗಳಿಂದ ಬಳಲುವ ಬಡ ರೋಗಿಗಳಿಗೆ ಸಹಾಯ ಹಸ್ತವನ್ನು ನೀಡುವ ಉದ್ದೇಶದಿಂದ ರಾಣಿಪುರ ವೆಲ್ಪೇರ್ ಏಸೋಸಿಯೇಷನ್ ಈ ಚಾರಿಟಿ ಟ್ರೋಫಿ ಪಂದ್ಯಾಟವನ್ನು ಆಯೋಜಿಸಿತ್ತು , ತಾ 5ರಂದು ಬೆಳಿಗ್ಗೆ ಫಾದರ್ ಪಾವೊಸ್ತಿನ್ ಲೂಕಸ್ ಲೋಬೊ (ಆಡಳಿತ ಅಧಿಕಾರಿ ಫಾ ಮುಲ್ಲರ್ ಹೋಮಿಯೋಪತಿ) ಅವರು ಕ್ರಿಕೆಟ್ ಪಂದ್ಯಾಟವನ್ನು ಉದ್ಗಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಸ್ಥಾಪಕ ಅಧ್ಯಕ್ಷರಾದ ಜೋಸೆಫ್ ಪಾವ್ಲ್ ಲೋಬೋ ಅವರು ಉಪಸ್ಥಿತರಿದ್ದರು. ಎರಡು ದಿನಗಳ ಕಾಲ ಸುಸೂತ್ರವಾಗಿ ಹಾಗೂ ಬಹಳ ಅಚ್ಚು ಕಟ್ಟಾಗಿ ನಡೆದ ಪಂದ್ಯಾಟಗಳು ತಾ 6ರಂದು ಸಂಜೆ ಮೂಡಬಿದ್ರೆಯ ಪಾಲಡ್ಕ ತಂಡ ಹಾಗೂ ಪೆರ್ಮನೂರಿನ ಸೆಬಾಸ್ಟಿಯನ್ ತಂಡವು ಫೈನಲ್ ಸೆಣಾಸಾಟ ನಡೆಸಿ ಫಾಲಡ್ಕ ತಂಡ ವಿಜಯಿಯಾಯಿತು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವೆಲ್ಫೇರ್ ಎಸೋಸಿಯೇಷನ್ ಅಧ್ಯಕ್ಷರಾದ ಫೆಲಿಕ್ಸ್ ಮೊಂತೇರೋ ವಹಿಸಿಕೊಂಡರು. ಮುಖ್ಯ ಅಥಿತಿಗಳಾಗಿ ಸಾಹಿತಿ ಹಾಗೂ ಪೋಕಸ್ ಇಂಡಿಯಾ ಸಂಘಟನೆಯ ಅಧ್ಯಕ್ಷ ಯುವ ನಾಯಕ ವಿನೋದ್ ಪಿಂಟೋ ತಾಕೋಡೆ , ರೂಪೇಶ್ ನಿಲಿಮಾ ದಂಪತಿಗಳು ರಾಣಿಪುರ, ಗ್ರೇಸಿ ಮೊಂತೇರೊ ರಾಣಿಪುರ , ಚಾರಿಟಿ ಟ್ರೋಫಿ ಸಂಚಾಲಕರಾದ ಜೀವನ್ ಪೆರಾವೊ, ಕೋಶಾಧಿಕಾರಿ ಟೈಟಸ್ ಡಿಸೋಜ ಕಾರ್ಯದರ್ಶಿ ಆಲ್ವಿನ್ ಡಿಸೋಜ ಇವರೆಲ್ಲರು ವೇದಿಕೆಯಲ್ಲಿದ್ದರು. ಅಧ್ಯಕ್ಷ ರಾದ ಫೆಲಿಕ್ಸ್ ಮೊಂತೇರೋ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸರಿ ಸುಮಾರು 20 ಬಡ ರೋಗಿಗಳಿಗೆ ಹಾಗೂ ಅಶಕ್ತರಿಗೆ ಸಹಾಯ ಹಸ್ತವನ್ನು ಚೆಕ್ ಗಳ ಮುಕಾಂತರ ನೀಡಲಾಯಿತು, ಈ ಸಂದರ್ಭದಲ್ಲಿ ಮುಖ್ಯ ಅಥಿತಿಗಳಾಗಿ ಮಾತನಾಡಿದ ವಿನೋದ್ ಪಿಂಟೋ ತಾಕೋಡೆಯವರು, ಕ್ರಿಶ್ಚಿಯಿನ್ನರ ಈ ತಪಸ್ಸು ಕಾಲದಲ್ಲಿ ಬಡವರಿಗೆ ದೀನದಲಿತರಿಗೆ ಸಹಾಯ ಮಾಡಿ ಅವರಲ್ಲಿ ದೇವರನ್ನು ಕಾಣುವ ರಾಣಿಪುರ ವೆಲ್ಫೇರ್ ಸಂಘಟನೆಯ ಕಾರ್ಯವನ್ನು ಶ್ಲಾಘಿಸಿದರು. ಇಂಥಹ ಸಂಘಟನೆಗಳು ಉತ್ತಮ ಹಾಗೂ ಆರೋಗ್ಯಕರ ಸಮಾಜವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ ಇಂಥಹ ಪಂದ್ಯಾಟಗಳು ಹಾಗೂ ಚಾರಿಟಿ ವರ್ಕ್ ಮುಂದಿನ ವರುಷಗಳಲ್ಲಿ ಇನ್ನು ದೊಡ್ಡ ಮಟ್ಟದಲ್ಲಿ ನಡೆಯುವಂತಾಗಲಿ ಎಂದು ಶುಭ ಹಾರೈಸಿದರು. ಕಾರ್ಯದರ್ಶಿ ಆಲ್ವಿನ್ ಡಿಸೋಜ ವಂದಿಸಿದರು.
ಡೆಲನ್ ಲೋಬೋ ಕಾರ್ಯಕ್ರಮ ನಿರೂಪಿಸಿದರು.
ಗೆದ್ದ ತಂಡಗಳ ವಿವರ
ವಿನ್ನರ್:
ಸೈಂಟ್ ಲೋಯೋಲಾ ಚರ್ಚ್ ಪಾಲಡ್ಕ, ಟ್ರೋಫಿ ಹಾಗೂ 30 ಸಾವಿರ ನಗದು.
ರನ್ನರ್: ಸೇಂಟ್ ಸೆಬೇಸ್ಟಿಯನ್ ಚರ್ಚ್ ಪೆರ್ಮನೂರ್, ಟ್ರೋಫಿ ಹಾಗೂ 20 ಸಾವಿರ ನಗದು
ತೃತೀಯ: MYC ಮರೀಲ್ ಹಾಗೂ ಪೆರ್ಮನೂರ್ ಸ್ಟೋರ್ಟ್ಸ್ ಕ್ಲಬ್,
ವೈಯುಕ್ತಿಕ ಬಹುಮಾನಗಳು:
ಮ್ಯಾನ್ ಆಪ್ ದಿ ಮ್ಯಾಚ್ ನಿತಿನ್ ಪಾಲಡ್ಕ,ಮ್ಯಾನ್ ಆಫ್ ಧಿ ಸೀರಿಸ್ ಮತ್ತು ಬೆಸ್ಟ್ ಬ್ಯಾಟ್ಸ್ಮನ್: ಗ್ಲೆನ್ ಸನ್ ಪಾಲಡ್ಕ, ಬೆಸ್ಟ್ ಬೌವ್ಲರ್: ಕೊನ್ವೆಲ್ ಪೆರ್ಮನೂರ್.

ಇತ್ತೀಚಿನ ಸುದ್ದಿ

ಜಾಹೀರಾತು