8:11 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

Cong Protest | ಕೇಂದ್ರ ಬಿಜೆಪಿ ಸರ್ಕಾರದ ಬೆಲೆಯೇರಿಕೆ: ಯುವ ಕಾಂಗ್ರೆಸ್ ನಿಂದ ಎತ್ತಿನಗಾಡಿಯ ಮೂಲಕ ವಿನೂತನ ಪ್ರತಿಭಟನೆ

08/04/2025, 19:37

ಬೆಂಗಳೂರು(reporterkarnataka.com): ಫೀಡಂಪಾರ್ಕ್ ನಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ.ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹೆಚ್.ಎಸ್.ಮಂಜುನಾಥ್ ಗೌಡರವರ ನೇತೃತ್ವದಲ್ಲಿ ವಿನೂತನವಾಗಿ ಎತ್ತಿನಗಾಡಿ ಮೂಲಕ ಬೃಹತ್ ಪ್ರತಿಭಟನೆ ಜರುಗಿತು.


ಯುವ ಕಾಂಗ್ರೆಸ್ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಹೆಚ್.ಎಸ್.ಮಂಜುನಾಥ್ ಗೌಡರವರು ಮಾತನಾಡಿ ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರ ಆದೇಶ ಮೇರೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರ ಮಾರ್ಗದರ್ಶನದಲ್ಲಿ ಕೇಂದ್ರ ಬಿಜೆಪಿ ಸರ್ಕರದ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ.
ಕೇಂದ್ರ ಬಿಜೆಪಿ ಸರ್ಕಾರ ದೇಶದ 140 ಜನರ ಹೊಟ್ಟೆಯ ಮೇಲೆ ಬರೆ ಏಳೆದಿದ್ದಾರೆ, ಪೆಟ್ರೋಲ್, ಡಿಸೇಲ್ ಮತ್ತು ಎಲ್.ಪಿಜಿ.ಗ್ಯಾಸ್ ಬೆಲೆ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದವರು ಜೀವನ ಸಂಕಷ್ಟಕ್ಕೆ ತಳ್ಳಿದ್ದಾರೆ.
ಉದ್ಯೋಗವಿಲ್ಲ, ನಿರುದ್ಯೋಗ ಸಮಸ್ಯೆ ತಲೆದೋರಿದೆ, ಇದರ ಜೊತೆಯಲ್ಲಿ ಬೆಲೆ ಏರಿಕೆಯಿಂದ ಜನರ ಜೀವನ ನಡೆಸುವುದು ಹೇಗೆ?
ಪ್ರಧಾನಿ ನರೇಂದ್ರ ಮೋದಿರವರ 11ವರ್ಷಗಳ ದುರಾಡಳಿತದಿಂದ ದೇಶದ ಆರ್ಥಿಕ ಪರಿಸ್ಥಿತಿ ಕುಸಿದಿದೆ, ಅಚ್ಚೇದೀನ್ ಎಂದರೆ ಇದೇನಾ….?
ಜನಸಾಮಾನ್ಯರ ನೋವಿಗೆ, ಸ್ಪಂದಿಸುವ ಕಾರ್ಯ ಯುವ ಕಾಂಗ್ರೆಸ್ ಮಾಡುತ್ತಿದೆ, ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಯುವ ಕಾಂಗ್ರೆಸ್ ಹೋರಾಟ ಮಾಡಲಿದೆ ಎಂದು ಹೇಳಿದರು.
ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ದಿವ್ಯಾ, ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗೌಡ, ಕೇಂದ್ರ ಜಿಲ್ಲಾ ಯುವ ಕಾಂಗ್ರೆಸ್ ರಂಜೀತ್, ದಕ್ಷ್ಮಿಣ ಜಿಲ್ಲಾ ಮೌನೀಶ್ ರೆಡ್ಡಿ, ರಾಜ್ಯ ಪ್ರದಾನ ಕಾರ್ಯದರ್ಶಿಗಳಾದ ಚೇತನ್ ಕುಮಾರ್, ಶಂಶಾಕ್ ಗೌಡ ರವರು ವಿಧಾನಸಭಾ ಕ್ಷೇತ್ರ ಮತ್ತು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು