2:38 PM Friday20 - February 2026
ಬ್ರೇಕಿಂಗ್ ನ್ಯೂಸ್
ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8…

ಇತ್ತೀಚಿನ ಸುದ್ದಿ

Rain | ಚಿಕ್ಕಮಗಳೂರು: ಅಲಿಕಲ್ಲು ಸಹಿತ ಧಾರಾಕಾರ ಮಳೆ; ಕಾಫಿ ಬೆಳೆಗಾರರು ಕಂಗಾಲು

08/04/2025, 22:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದೆ. ಅಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದ್ದು, ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ.
ಆಲಿಕಲ್ಲು ಮಳೆಯಿಂದ ಮನೆ ಅಂಗಳದ ತುಂಬಾ ಮಲ್ಲಿಗೆ ಹೂ ಸುರಿದಂತೆ ಕಂಡು ಬರುತ್ತಿತ್ತು. ಆಲಿಕಲ್ಲು ಮಳೆಯಿಂದ ಕಾಫಿ ಬೆಳೆಗೆ ಭಾರೀ ಪ್ರಮಾಣದಲ್ಲಿ ಹಾನಿಯುಂಟಾಗಿದೆ. ಕಾಫಿ ಕಾಯಾಗುವ ವೇಳೆಯಲ್ಲಿ ಆಲಿಕಲ್ಲು ಮಳೆ ಬೆಳೆ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.


ಕಾಫಿ ಮೇಲೆ ಆಲಿಕಲ್ಲು ಬಿದ್ರೆ ಕಾಫಿ ಬೀಜಕ್ಕೆ ಡ್ಯಾಮೇಜ್ ಆಗಿ ಕೊಳೆಯುವ ಸ್ಥಿತಿ ತಲುಪುತ್ತದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಿನ್ನಡಿ, ತರುವೆ, ಬಣಕಲ್, ಅತ್ತಿಗೆರೆ, ಚಾರ್ಮಾಡಿ ಘಾಟ್, ಬಾಳೂರು ಸುತ್ತಮುತ್ತ,
ಕಳಸ, ಬಾಳೆಹೊನ್ನೂರು, ಮೂಡಿಗೆರೆ ತಾಲೂಕಿನ ವಿವಿಧ ಭಾಗದಲ್ಲಿ ಅಬ್ಬರದ ಮಳೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು