8:55 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ತುಂಬೆ ಫೆಸ್ಟ್ ಬೃಹತ್ ಮೇಳ ಯಶಸ್ವಿಗೊಳಿಸಲು ಸ್ಪೀಕರ್ ಯು.ಟಿ. ಖಾದರ್ ಕರೆ

08/04/2025, 23:21

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯರಿಗೆ ಅನುಕೂಲವಾಗುವಂತೆ ತುಂಬೆಯಲ್ಲಿ ತುಂಬೆ ಫೆಸ್ಟ್ 2025 ಕಾರ್ಯಕ್ರಮವನ್ನು ಏ.11ರಿಂದ13 ರವರೆಗೆ ಆಯೋಜಿಸಲಾಗಿದೆ. ವಿವಿಧ ಆಹಾರ ಮತ್ತು ಇನ್ನಿತರ ಮಳಿಗೆಗಳೊಂದಿಗೆ ಮೂರು ದಿನಗಳು ಸೌಹಾರ್ದ ಸಮ್ಮೇಳನವಾಗಿ ನಡೆಯಲಿದೆ. ಸುತ್ತಮುತ್ತಲಿನ ಗ್ರಾಮಗಳಲ್ಲದೆ ಸಾರ್ವಜನಿಕರು ಭಾಗವಹಿಸುವಂತೆ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕರೆ ನೀಡಿದ್ದಾರೆ.
ಅವರು ತುಂಬೆ ಬಿ.ಎ. ಕಾಲೇಜಿನಲ್ಲಿ ಕಾರ್ಯಕ್ರಮದ ಪೂರ್ವ ತಯಾರಿ ಪ್ರಯುಕ್ತ ನಡೆದ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ತುಂಬೆ ಫೆಸ್ಟ್ ಬಗ್ಗೆ ಮಾಹಿತಿ ನೀಡಿದರು.
ಫೆಸ್ಟ್ ನಲ್ಲಿ ಯೇನಪೋಯ ವಿಶ್ವವಿದ್ಯಾನಿಲಯದಿಂದ ಆರೋಗ್ಯ ತಪಾಸಣಾ ಶಿಬಿರ , ಗಲ್ಫ್ ಮೆಡಿಕಲ್ ಯುನಿವರ್ಸಿಟಿಯಿಂದ ಉದ್ಯೋಗ ಮಾಹಿತಿ, ಆಹಾರ ಮೇಳ , ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಉಮೇಶ್ ಮಿಜಾರ್ ತಂಡದಿಂದ ತೆಲಿಕೆದ ಗೊಂಚಿಲು, ಪಿಲಿ ನಲಿಕೆ, ಚೆಂಡೆ ವಾದನ, ಬಹುಭಾಷಾ ಕವಿಗೋಷ್ಠಿ , ದಫ್, ಭರತನಾಟ್ಯ, ಅಂತಾರಾಷ್ಟ್ರೀಯ ಖ್ಯಾತಿಯ ಬಾಲಿವುಡ್ ರಾಕ್ ಮ್ಯೂಸಿಕ್ ಮೊದಲಾದ ಹಲವು ಕಾರ್ಯಕ್ರಮಗಳನ್ನು ಸಂಯೋಜಿಸಲಾಗಿದೆ ಎಂದು ತಿಳಿಸಿದರು.
ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸ್ಪೀಕರ್, ಯಾವುದೇ ಕುಂದು ಕೊರತೆ ಆಗದಂತೆ ಸೂಕ್ತ ವ್ಯವಸ್ಥೆ ಹಾಗೂ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಎಲ್ಲಾ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಅಗತ್ಯ ಸ್ಥಳಗಳಿಗೆ ಸಿಸಿಟಿವಿ ಕ್ಯಾಮರಾ ಅಳವಡಿಸುವಂತೆ ಪೋಲಿಸ್ ಇಲಾಖೆಗೆ ತಿಳಿಸಿದರು. ಅಗ್ನಿಶಾಮಕ ದಳ , ಮೆಸ್ಕಾಂ ಅಧಿಕಾರಿಗಳು ಸನ್ನದ್ಧವಾಗಿರುವಂತೆ ಹೇಳಿದರು.
ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಕಾರ್ಯಕ್ರಮದ ವಿವಿರ ನೀಡಿದರು. ಏ. 11ರಂದು ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ , ಮೊಡಂಕಾಪು ಇನ್ಫೆಂಟ್ ಜೀಸಸ್ ಚರ್ಚಿನ ಧರ್ಮಗುರು ರೆ.ಫಾ.ವಲೇರಿಯನ್ ಡಿಸೋಜ ಮತ್ತು ಮಿತ್ತಬೈಲು ಮಸೀದಿಯ ಅಲ್‌ಹಾಜ್ ಕೆ.ಪಿ. ಇರ್ಶಾದ್ ದಾರಿಮಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಸಭೆಯಲ್ಲಿ ಮಾಜಿ ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪ್ರಾಂಶುಪಾಲ ವಿ. ಸುಬ್ರಮಣ್ಯ ಭಟ್, ತುಂಬೆ ಗ್ರಾ.ಪಂ. ಅಧ್ಯಕ್ಷೆ ಜಯಂತಿ, ಬಿ.ಎ. ಸಮೂಹ ಸಂಸ್ಥೆಯ ನಿರ್ದೇಶಕ ಅಬ್ದುಲ್ ಸಲಾಂ, ಅಬ್ದುಲ್ ಅಶ್ರಫ್ , ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ್ ಚೌಟ ಬದಿಗುಡ್ಡೆ , ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ , ಪೋಲಿಸ್ ಇನ್ಸ್ಪೆಕ್ಟರ್ ಶಿವಕುಮಾರ್, ಸಂಚಾರಿ ಠಾಣೆ ಎಸ್.ಐ ಸುತೇಶ್ ಕುಮಾರ್ ಮೊದಲಾದವರಿದ್ದರು.
ಬಿ.ಎ ಐಟಿಐ ಪ್ರಾಂಶುಪಾಲ ನವೀನ್ ಪ್ರಸ್ತಾವನೆ ಗೈದರು. ಸಂಸ್ಥೆಯ ಅಧೀಕ್ಷಕ ಬಿ.ಅಬ್ದುಲ್ ಕಬೀರ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು