9:50 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

Puttur | ಮುಳಿಯ ಜುವೆಲ್ಸ್ ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್: ಹೊಸ ಲೋಗೋ ಅನಾವರಣ

10/04/2025, 18:34

ಪುತ್ತೂರು(reporterkarnataka.com): ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊ ದೊಂದಿಗೆ ನಿಮ್ಮ ಮುಂದಿದೆ.
ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಈ ಹೊಸ ಲಾಂಛನವನ್ನು ಬಿಡುಗಡೆ ಮಾಡಿದರು.
ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness) ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ.
“ಇದೇ ತಿಂಗಳು ಹೊಚ್ಚ ಹೊಸತನದೊಂದಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಎಂದು ಮರುನಾಮಕರಣಗೊಳ್ಳಲಿದೆ.
ಗ್ರಾಹಕರಿಗೆ ಯಾವಾಗಲೂ ಹೊಸತನ ನೀಡುವುದು ಮುಳಿಯ ವಿಶೇಷ. ಈ ಹೊಸ ಲೋಗೋ ಆಧುನಿಕತೆಯನ್ನು ಮತ್ತು ಡಿಸೈನ್ ಎಲಿಮೆಂಟ್ ಹೊಂದಿದ್ದು ಹೊಸ ಟ್ರೆಂಡ್ ಗಳನ್ನು ಹೊರ ಸೂಸುತ್ತದೆ. ನಂಬಿಕೆ ಮತ್ತು ಪರಂಪರೆಯ ಜೊತೆಗೆ ಮುಳಿಯದ mascot ಆಗಿರುವ ಆನೆ ಮರಿ ದೃಢತೆ ಮತ್ತು ನಾಯಕತ್ವ ಮತ್ತು ಎಗ್ರೆಸಿವ್ ವಿಚಾರಗಳನ್ನು ಮುಂದಿಡುತ್ತದೆ” ಶುದ್ಧತೆ ಮೀರಿದ ಪರಿಪೂರ್ಣತೆ ಯೆಡೆಗೆ ಸಾಗಿ ಬಂದು ಮುಳಿಯ ತನ್ನ ಸುತ್ತಮುತ್ತ ಸಂತೋಷ ಉಣ ಬಡಿಸಿದೆ ಎನ್ನುತ್ತಾರೆ ಕೇಶವ ಪ್ರಸಾದ್ ಮುಳಿಯ.
ಕಳೆದ ಮೂರು ತಲೆಮಾರುಗಳಿಂದ ಗ್ರಾಹಕರ ಮತ್ತು ಜನತೆಯ ವಿಶ್ವಾಸ ಗಳಿಸಿ – ಉಳಿಸುತ್ತಿರುವುದು ನಮ್ಮ ಮುಳಿಯ ಪರಂಪರೆ. ಜನರಿಗೆ ಚಿನ್ನದೊಂದಿಗೆ ಸಂತೃಪ್ತಿ,- ಸಂತೋಷ ನೀಡಿದ್ದೇವೆ.. ನೀವು ಮನಸಾರೆ ನಮ್ಮನ್ನು ಹರಸಿದ್ದೀರಿ.. Creating happiness (ಸದಾ ಸಂತೋಷ ) ನೀಡುವ ನಮ್ಮ ಹೊಸತನಗಳು ಮುಂದಿನ ದಿನಗಳಲ್ಲಿ ಇನ್ನಷ್ಟು, ಮತ್ತಷ್ಟು ಹೊಸತನದೊಂದಿಗೆ ಬರುತ್ತಿದ್ದೇವೆ” ಎನ್ನುತ್ತಾರೆ ಕೃಷ್ಣ ನಾರಾಯಣ ಮುಳಿಯ.

“ಈ ಹೊಸ ಲೋಗೋವನ್ನು ಪುತ್ತೂರಿನ ಸಾಫ್ಟ್ವೇರ್ ಕಂಪನಿ ಯಾದ ” ದ ವೆಬ್ ಪೀಪಲ್ “ಮಾಡಿರುತ್ತದೆ” ಎಂದು ಮುಳಿಯ ಸಂಸ್ಥೆಯ ಬ್ರಾಂಡ್ ಮತ್ತು ಮಾರ್ಕೆಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮ ಈ ಸಂದರ್ಭದಲ್ಲಿ ಲೋಗೋದ ವಿನ್ಯಾಸದ ಕುರಿತು ವಿವರಿಸಿದರು. ಸಂಸ್ಥೆಯ ಮಾರ್ಕೆಟಿಂಗ್ ವ್ಯವಸ್ಥಾಪಕ ಸಂಜೀವ ಹಾಗೂ ದ ವೆಬ್ ಪೀಪಲ್ ಪಾಲುದಾರರಾದ ಆದಿತ್ಯ ಕಲ್ಲುರಾಯ ಮತ್ತು ಶರತ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು