7:58 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಶಬರಿಮಲೆ: ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದು ಸೋಲಾಪುರ ಮೂಲದ ಬಂಟ್ವಾಳದ ಶಿಕ್ಷಕ ಸಾವು

11/04/2025, 17:14

ಬಂಟ್ವಾಳ(reporterkarnataka.com): ಅಯ್ಯಪ್ಪ ವ್ರತಧಾರಿಯಾಗಿ ಸ್ನೇಹಿತರ ಜೊತೆಗೆ ಶಬರಿಮಲೆ ಯಾತ್ರೆಗೆ ತೆರಳಿದ್ದ ಮುಖ್ಯ ಶಿಕ್ಷಕರೋರ್ವರು ಪಂಬ ಸನ್ನಿಧಿಯಲ್ಲಿ ಕುಸಿದು ಇಹಲೋಕ ತ್ಯಜಿಸಿದ್ದಾರೆ.
ಬಂಟ್ವಾಳ ತಾಲೂಕಿನ ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾಗಿದ್ದ ಉಮರಗಿ ಶರಣಪ್ಪ (57)ಅವರು ಅಯ್ಯಪ್ಪ ವ್ರತಧಾರಿಗಳ ಗುಂಪಿನಲ್ಲಿ ಬುಧವಾರ ಮುಂಜಾನೆ ಸುಮಾರು 6.30ರ ಹೊತ್ತಿಗೆ ದೇವರ ದರ್ಶನಕ್ಕೆ ಹೋಗುತ್ತಿದ್ದಾಗ ಕುಸಿದು ಬಿದ್ದಿದ್ದರು. ತಕ್ಷಣ ಜೊತೆಗಿದ್ದವರು ಪ್ರಥಮ ಚಿಕಿತ್ಸೆ ನೀಡಿ ಸ್ಥಳೀಯ ‌ಆಸ್ಪತ್ರೆಗೆ ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಯಿತಾದರೂ ಬಳಿಕ ಹೃದಯ ಸ್ಥಂಭನಗೊಂಡು ನಿಧನರಾದರು.
ಮೂಲತಃ ಕರ್ನಾಟಕ- ಮಹಾರಾಷ್ಟ್ರ ಗಡಿಪ್ರದೇಶದ ಸೋಲಾಪುರ ನಿವಾಸಿಯಾಗಿದ್ದು ಕಳೆದ 28 ವರ್ಷಗಳಿಂದ ಬಂಟ್ವಾಳ ತಾಲೂಕಿನ ನರಿಕೊಂಬುವಿನಲ್ಲಿ‌ ವಾಸವಾಗಿದ್ದರು.
ಬಿ.ಸಿ.ರೋಡಿನ ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ದ ಸಹಕಾರಿ ಸಂಘದ‌ ಉಪಾಧ್ಯಕ್ಷರಾಗಿದ್ದರು. ವಿಟ್ಲ ಅಧ್ಯಾಪಕರ ಸಹಕಾರಿ ಸಂಘದ ನಿರ್ದೇಶಕರಾಗಿ, ಮುಖ್ಯ ಶಿಕ್ಷಕರ ಸಂಘದ ಉಪಾಧ್ಯಕ್ಷ ರಾಗಿ ಸೇವೆ ಸಲ್ಲಿಸಿದ್ದ ಅವರು ಸ್ಕೌಟ್ಸ್ ಗೈಡ್ಸ್ ಸಂಘಟನೆಯಲ್ಲಿ ಮಾಣಿ ವಲಯ ಕಾರ್ಯ ದರ್ಶಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು,ಪುತ್ರಿ, ಸೊಸೆಯಂದಿರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು