8:26 AM Sunday28 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಶಬರಿಮಲೆ: ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದು ಸೋಲಾಪುರ ಮೂಲದ ಬಂಟ್ವಾಳದ ಶಿಕ್ಷಕ ಸಾವು

11/04/2025, 17:14

ಬಂಟ್ವಾಳ(reporterkarnataka.com): ಅಯ್ಯಪ್ಪ ವ್ರತಧಾರಿಯಾಗಿ ಸ್ನೇಹಿತರ ಜೊತೆಗೆ ಶಬರಿಮಲೆ ಯಾತ್ರೆಗೆ ತೆರಳಿದ್ದ ಮುಖ್ಯ ಶಿಕ್ಷಕರೋರ್ವರು ಪಂಬ ಸನ್ನಿಧಿಯಲ್ಲಿ ಕುಸಿದು ಇಹಲೋಕ ತ್ಯಜಿಸಿದ್ದಾರೆ.
ಬಂಟ್ವಾಳ ತಾಲೂಕಿನ ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾಗಿದ್ದ ಉಮರಗಿ ಶರಣಪ್ಪ (57)ಅವರು ಅಯ್ಯಪ್ಪ ವ್ರತಧಾರಿಗಳ ಗುಂಪಿನಲ್ಲಿ ಬುಧವಾರ ಮುಂಜಾನೆ ಸುಮಾರು 6.30ರ ಹೊತ್ತಿಗೆ ದೇವರ ದರ್ಶನಕ್ಕೆ ಹೋಗುತ್ತಿದ್ದಾಗ ಕುಸಿದು ಬಿದ್ದಿದ್ದರು. ತಕ್ಷಣ ಜೊತೆಗಿದ್ದವರು ಪ್ರಥಮ ಚಿಕಿತ್ಸೆ ನೀಡಿ ಸ್ಥಳೀಯ ‌ಆಸ್ಪತ್ರೆಗೆ ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಯಿತಾದರೂ ಬಳಿಕ ಹೃದಯ ಸ್ಥಂಭನಗೊಂಡು ನಿಧನರಾದರು.
ಮೂಲತಃ ಕರ್ನಾಟಕ- ಮಹಾರಾಷ್ಟ್ರ ಗಡಿಪ್ರದೇಶದ ಸೋಲಾಪುರ ನಿವಾಸಿಯಾಗಿದ್ದು ಕಳೆದ 28 ವರ್ಷಗಳಿಂದ ಬಂಟ್ವಾಳ ತಾಲೂಕಿನ ನರಿಕೊಂಬುವಿನಲ್ಲಿ‌ ವಾಸವಾಗಿದ್ದರು.
ಬಿ.ಸಿ.ರೋಡಿನ ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ದ ಸಹಕಾರಿ ಸಂಘದ‌ ಉಪಾಧ್ಯಕ್ಷರಾಗಿದ್ದರು. ವಿಟ್ಲ ಅಧ್ಯಾಪಕರ ಸಹಕಾರಿ ಸಂಘದ ನಿರ್ದೇಶಕರಾಗಿ, ಮುಖ್ಯ ಶಿಕ್ಷಕರ ಸಂಘದ ಉಪಾಧ್ಯಕ್ಷ ರಾಗಿ ಸೇವೆ ಸಲ್ಲಿಸಿದ್ದ ಅವರು ಸ್ಕೌಟ್ಸ್ ಗೈಡ್ಸ್ ಸಂಘಟನೆಯಲ್ಲಿ ಮಾಣಿ ವಲಯ ಕಾರ್ಯ ದರ್ಶಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು,ಪುತ್ರಿ, ಸೊಸೆಯಂದಿರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು