10:54 AM Saturday4 - October 2025
ಬ್ರೇಕಿಂಗ್ ನ್ಯೂಸ್
Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ…

ಇತ್ತೀಚಿನ ಸುದ್ದಿ

ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರ ನೂತನ ಕಟ್ಟಡ, ಡಯಾಲಿಸಿಸ್ ಕೇಂದ್ರ, ಆಯುಷ್ ಆಸ್ಪತ್ರೆ ಕಟ್ಟಡಕ್ಕೆ ಶಂಕುಸ್ಥಾಪನೆ

11/04/2025, 22:22

ಮಂಗಳೂರು(reporterkarnataka.com):ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಮಗ್ರ ಆರೋಗ್ಯ ವ್ಯವಸ್ಥೆ ನೀಡಲು ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.
ಅವರು ಶುಕ್ರವಾರ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ, ಡಯಾಲಿಸಿಸ್ ಕೇಂದ್ರ, ಆಯುಷ್ ಆಸ್ಪತ್ರೆಯ ಕಟ್ಟಡ ಮೊದಲ ಮಹಡಿ ಶಂಕುಸ್ಥಾಪನೆ, ಶವಾಗಾರ ಕಟ್ಟಡ, ಬಿಪಿಸಿಎಲ್ ನೆರವಿನ ಪುನಶ್ಚೇತನ ಕೇಂದ್ರ ಕಟ್ಟಡ ಉದ್ಘಾಟಿಸಿ ಮಾತನಾಡಿದರು.



ಉಳ್ಳಾಲದಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಾಪಿಸಬೇಕೆಂದು ಸಾಕಷ್ಟು ಬೇಡಿಕೆ ಇತ್ತು. ಈ ನಿಟ್ಟಿನಲ್ಲಿ ಯೆನಪೋಯ ಮೆಡಿಕಲ್ ಕಾಲೇಜು ಸಹಯೋಗದೊಂದಿಗೆ ಡಯಾಲಿಸಿಸ್ ಕೇಂದ್ರ ನಿವ೯ಹಿಸಲಾಗುವುದು ಎಂದು ಅವರು ಹೇಳಿದರು.
ಪ್ರಾಥಮಿಕ ಆರೋಗ್ಯ ಕೇಂದ್ರವಾಗಿದ್ದ ಉಳ್ಳಾಲ ಆಸ್ಪತ್ರೆಯನ್ನು ಸಮುದಾಯ ಆಸ್ಪತ್ರೆಯಾಗಿ ಮೇಲ್ದಜೆ೯ಗೇರಿಸಲಾಗಿದೆ. ಇಲ್ಲಿ ದೊರಕುತ್ತಿರುವ ಉತ್ತಮ ವೈದ್ಯಕೀಯ ಚಿಕಿತ್ಸೆಯಿಂದ ಹಿಂದೆ ಪ್ರತೀ ದಿನ 30ರಷ್ಟಿದ್ದ ಹೊರರೋಗಿಗಳ ಸಂಖ್ಯೆ ಸುಮಾರು 400 ಕ್ಕೇರಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಸುಸಜ್ಜಿತವಾದ ಉಳ್ಳಾಲ ಆರೋಗ್ಯ ಕೇಂದ್ರ ರಾಜ್ಯಕ್ಕೆ ಮಾದರಿಯಾಗಿದೆ. ಇಲ್ಲಿಗೆ ವೈದ್ಯರು ಹಾಗೂ ಆಧುನಿಕ ವೈದ್ಯಕೀಯ ಉಪಕರಣಗಳನ್ನು ಒದಗಿಸಲಾಗುವುದು ಎಂದರು.
ರಾಜ್ಯದಲ್ಲಿ ಆರೋಗ್ಯ ಕೇಂದ್ರ ಮತ್ತು ಆಸ್ಪತ್ರೆಗಳಿಗೆ ಸಿಬ್ಬಂಧಿ ಒದಗಿಸಲು ಒತ್ತು ನೀಡಲಾಗಿದೆ. ಆರೋಗ್ಯ ಕ್ಕೆ ಸಂಬಂಧಿಸಿದ ತಂತ್ರಜ್ಞಾನಗಳು ಸುಧಾರಣೆಗೊಂಡಿವೆ. ಸರಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೌಲಭ್ಯಗಳನ್ನು ಒದಗಿಸಿದರೆ ಜನಸಾಮಾನ್ಯರಿಗೆ ಪ್ರಯೋಜನವಾಗಲಿದೆ ಎಂದು ಸಚಿವರು ಹೇಳಿದರು.
ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮುಡಾ ಅಧ್ಯಕ್ಷ ಸದಾಶಿವ, ಗೇರು ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಯೆನಪೋಯಾ ಅಬ್ದುಲ್ಲಾ ಕುಂಞಿ, ನಗರಸಭೆ ಅಧ್ಯಕ್ಷೆ ಶಶಿಕಲಾ, ಬಿಪಿಸಿಎಲ್ ಅಧಿಕಾರಿ ಮೀರಾ ಸಿಂಗ್, ಯೆನಪೋಯಾ ವಿವಿ ಕುಲಪತಿ ಅಬ್ದುಲ್ಲಾ ಕುಂಞಿ ಮತ್ತಿತರರು ಇದ್ದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು