11:54 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Bantwal | ಧರ್ಮ ಎಲ್ಲರನ್ನೂ ಒಗ್ಗೂಡಿಸುತ್ತದೆ: ತುಂಬೆ ಫೆಸ್ಟ್- 2025 ಉದ್ಘಾಟಿಸಿ ಒಡಿಯೂರು ಶ್ರೀ

12/04/2025, 10:38

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಸರ್ವ ಧರ್ಮವೂ ಶ್ರೇಷ್ಠ ವಾದುದು. ಅದು ಎಲ್ಲರನ್ನೂ ಒಗ್ಗೂಡಿಸುತ್ತದೆ. ಉತ್ಸವಗಳ ಉದ್ದೇಶ ಜನರಲ್ಲಿ‌ ಜಾಗೃತಿ ಮೂಡಿಸುವ ಕೆಲಸವಾಗಿದೆ. ದೇಶ ಬೆಳೆಯಬೇಕಾದರೆ ಪ್ರಜ್ಞಾವಂತ ಪ್ರಜೆಗಳು ‌ಅಭಿವೃದ್ಧಿಯಾಗಬೇಕು ಎಂದು ಒಡಿಯೂರು ಕ್ಷೇತ್ರದ‌ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಅವರು ಬಂಟ್ವಾಳ ತಾಲೂಕಿನ ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆ ಬಳಿ‌ ತುಂಬೆ ಗ್ರೌಂಡ್ಸ್ ನಲ್ಲಿ ಏ.11ರಿಂದ‌ 13 ರವರೆಗೆ ನಡೆಯಲಿರುವ ತುಂಬೆ ಫೆಸ್ಟ್ -2025 ಕಾರ್ಯಕ್ರಮ ಉದ್ಘಾಟಿಸಿ‌ ಶುಭಹಾರೈಸಿ ಮಾತನಾಡಿದರು.


ಮೊಡಂಕಾಪು ಇನ್ಫೆಂಟ್ ಜೀಸಸ್ ಚರ್ಚ್ ನ ಧರ್ಮಗಿರುಗಳಾದ ರೆ.ಫಾ. ವಲೇರಿಯನ್ ಡಿಸೋಜ ಮುಖ್ಯ‌ ಅತಿಥಿಯಾಗಿ ಮಾತನಾಡಿ ಭಾರತ ಮಾತೆಯ ಮಕ್ಕಳೆಲ್ಲಾ ಒಂದೇ ಎಂಬ ಭಾವನೆ ಬೆಳೆದು ಮಾನವೀಯತೆಯನ್ನು ರೂಢಿಸಿಕೊಳ್ಳಬೇಕೆಂದರು.
ಅಲ್ ಹಾಜ್‌ ಕೆ.ಪಿ.ಇರ್ಷಾದ್ ದಾರಿಮಿ ಮಿತ್ತಬೈಲ್ ಅತಿಥಿ ಯಾಗಿ ಉಪಸ್ಥಿತರಿದ್ದರು.
ಅತಿಥಿಗಳನ್ನು ಚೆಂಡೆವಾದನದೊಂದಿಗೆ‌ ಸಭಾ ವೇದಿಕೆಗೆ ಸ್ವಾಗತಿಸಲಾಯಿತು.
ಫೆಸ್ಟ್ ಸಂಯೋಜಕರಾದ ಬಿ.ಎಂ.ಅಶ್ರಫ್, ತುಂಬೆ ‌ಬಿ.ಎ.ಗ್ರೂಪ್ ಎಂ.ಡಿ. ಬಿ.ಅಬ್ದುಲ್ ಸಲಾಂ, ಐಟಿಐ ಕಾಲೇಜಿನ ಪ್ರಾಂಶುಪಾಲ ನವೀನ ಕುಮಾರ್ ಕೆ.ಎಸ್‌., ಪಿಯು ಕಾಲೇಜು ಪ್ರಾಂಶುಪಾಲ ಸುಬ್ರಹ್ಮಣ್ಯ ಭಟ್, ಶಿಕ್ಷಕರಾದ ಜಗದೀಶ ರೈ, ಸಾಯಿ ರಾಮ್ , ದಿನೇಶ್ ಶೆಟ್ಟಿ ಮೊದಲಾದವರಿದ್ದರು.
ಮೇಳದಲ್ಲಿ ಯೇನೆಪೋಯ ಮಹಿಳಾ ಆರೋಗ್ಯ ಸಂಚಾರಿ ಆಸ್ಪತ್ರೆಯ ವತಿಯಿಂದ ಆರೋಗ್ಯ ತಪಾಸಣೆ, ತೋಟಗಾರಿಕಾ ಇಲಾಖೆಯ ಯಂತ್ರೋಪಕರಣ ಪ್ರದರ್ಶನ, ಸಿರಿಧಾನ್ಯ ಮಾರಾಟ, ಸ್ತ್ರೀ ಶಕ್ತಿ ಸಂಘಟನೆಯ ವಿವಿಧ ಮಳಿಗೆಗಳು ಗಮನ ಸೆಳೆದವು. ಯೇನೆಪೋಯ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು