11:11 AM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

Bantwal | ಧರ್ಮ ಎಲ್ಲರನ್ನೂ ಒಗ್ಗೂಡಿಸುತ್ತದೆ: ತುಂಬೆ ಫೆಸ್ಟ್- 2025 ಉದ್ಘಾಟಿಸಿ ಒಡಿಯೂರು ಶ್ರೀ

12/04/2025, 10:38

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಸರ್ವ ಧರ್ಮವೂ ಶ್ರೇಷ್ಠ ವಾದುದು. ಅದು ಎಲ್ಲರನ್ನೂ ಒಗ್ಗೂಡಿಸುತ್ತದೆ. ಉತ್ಸವಗಳ ಉದ್ದೇಶ ಜನರಲ್ಲಿ‌ ಜಾಗೃತಿ ಮೂಡಿಸುವ ಕೆಲಸವಾಗಿದೆ. ದೇಶ ಬೆಳೆಯಬೇಕಾದರೆ ಪ್ರಜ್ಞಾವಂತ ಪ್ರಜೆಗಳು ‌ಅಭಿವೃದ್ಧಿಯಾಗಬೇಕು ಎಂದು ಒಡಿಯೂರು ಕ್ಷೇತ್ರದ‌ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಅವರು ಬಂಟ್ವಾಳ ತಾಲೂಕಿನ ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆ ಬಳಿ‌ ತುಂಬೆ ಗ್ರೌಂಡ್ಸ್ ನಲ್ಲಿ ಏ.11ರಿಂದ‌ 13 ರವರೆಗೆ ನಡೆಯಲಿರುವ ತುಂಬೆ ಫೆಸ್ಟ್ -2025 ಕಾರ್ಯಕ್ರಮ ಉದ್ಘಾಟಿಸಿ‌ ಶುಭಹಾರೈಸಿ ಮಾತನಾಡಿದರು.


ಮೊಡಂಕಾಪು ಇನ್ಫೆಂಟ್ ಜೀಸಸ್ ಚರ್ಚ್ ನ ಧರ್ಮಗಿರುಗಳಾದ ರೆ.ಫಾ. ವಲೇರಿಯನ್ ಡಿಸೋಜ ಮುಖ್ಯ‌ ಅತಿಥಿಯಾಗಿ ಮಾತನಾಡಿ ಭಾರತ ಮಾತೆಯ ಮಕ್ಕಳೆಲ್ಲಾ ಒಂದೇ ಎಂಬ ಭಾವನೆ ಬೆಳೆದು ಮಾನವೀಯತೆಯನ್ನು ರೂಢಿಸಿಕೊಳ್ಳಬೇಕೆಂದರು.
ಅಲ್ ಹಾಜ್‌ ಕೆ.ಪಿ.ಇರ್ಷಾದ್ ದಾರಿಮಿ ಮಿತ್ತಬೈಲ್ ಅತಿಥಿ ಯಾಗಿ ಉಪಸ್ಥಿತರಿದ್ದರು.
ಅತಿಥಿಗಳನ್ನು ಚೆಂಡೆವಾದನದೊಂದಿಗೆ‌ ಸಭಾ ವೇದಿಕೆಗೆ ಸ್ವಾಗತಿಸಲಾಯಿತು.
ಫೆಸ್ಟ್ ಸಂಯೋಜಕರಾದ ಬಿ.ಎಂ.ಅಶ್ರಫ್, ತುಂಬೆ ‌ಬಿ.ಎ.ಗ್ರೂಪ್ ಎಂ.ಡಿ. ಬಿ.ಅಬ್ದುಲ್ ಸಲಾಂ, ಐಟಿಐ ಕಾಲೇಜಿನ ಪ್ರಾಂಶುಪಾಲ ನವೀನ ಕುಮಾರ್ ಕೆ.ಎಸ್‌., ಪಿಯು ಕಾಲೇಜು ಪ್ರಾಂಶುಪಾಲ ಸುಬ್ರಹ್ಮಣ್ಯ ಭಟ್, ಶಿಕ್ಷಕರಾದ ಜಗದೀಶ ರೈ, ಸಾಯಿ ರಾಮ್ , ದಿನೇಶ್ ಶೆಟ್ಟಿ ಮೊದಲಾದವರಿದ್ದರು.
ಮೇಳದಲ್ಲಿ ಯೇನೆಪೋಯ ಮಹಿಳಾ ಆರೋಗ್ಯ ಸಂಚಾರಿ ಆಸ್ಪತ್ರೆಯ ವತಿಯಿಂದ ಆರೋಗ್ಯ ತಪಾಸಣೆ, ತೋಟಗಾರಿಕಾ ಇಲಾಖೆಯ ಯಂತ್ರೋಪಕರಣ ಪ್ರದರ್ಶನ, ಸಿರಿಧಾನ್ಯ ಮಾರಾಟ, ಸ್ತ್ರೀ ಶಕ್ತಿ ಸಂಘಟನೆಯ ವಿವಿಧ ಮಳಿಗೆಗಳು ಗಮನ ಸೆಳೆದವು. ಯೇನೆಪೋಯ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು