6:33 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Bantwal | ಧರ್ಮ ಎಲ್ಲರನ್ನೂ ಒಗ್ಗೂಡಿಸುತ್ತದೆ: ತುಂಬೆ ಫೆಸ್ಟ್- 2025 ಉದ್ಘಾಟಿಸಿ ಒಡಿಯೂರು ಶ್ರೀ

12/04/2025, 10:38

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಸರ್ವ ಧರ್ಮವೂ ಶ್ರೇಷ್ಠ ವಾದುದು. ಅದು ಎಲ್ಲರನ್ನೂ ಒಗ್ಗೂಡಿಸುತ್ತದೆ. ಉತ್ಸವಗಳ ಉದ್ದೇಶ ಜನರಲ್ಲಿ‌ ಜಾಗೃತಿ ಮೂಡಿಸುವ ಕೆಲಸವಾಗಿದೆ. ದೇಶ ಬೆಳೆಯಬೇಕಾದರೆ ಪ್ರಜ್ಞಾವಂತ ಪ್ರಜೆಗಳು ‌ಅಭಿವೃದ್ಧಿಯಾಗಬೇಕು ಎಂದು ಒಡಿಯೂರು ಕ್ಷೇತ್ರದ‌ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಅವರು ಬಂಟ್ವಾಳ ತಾಲೂಕಿನ ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆ ಬಳಿ‌ ತುಂಬೆ ಗ್ರೌಂಡ್ಸ್ ನಲ್ಲಿ ಏ.11ರಿಂದ‌ 13 ರವರೆಗೆ ನಡೆಯಲಿರುವ ತುಂಬೆ ಫೆಸ್ಟ್ -2025 ಕಾರ್ಯಕ್ರಮ ಉದ್ಘಾಟಿಸಿ‌ ಶುಭಹಾರೈಸಿ ಮಾತನಾಡಿದರು.


ಮೊಡಂಕಾಪು ಇನ್ಫೆಂಟ್ ಜೀಸಸ್ ಚರ್ಚ್ ನ ಧರ್ಮಗಿರುಗಳಾದ ರೆ.ಫಾ. ವಲೇರಿಯನ್ ಡಿಸೋಜ ಮುಖ್ಯ‌ ಅತಿಥಿಯಾಗಿ ಮಾತನಾಡಿ ಭಾರತ ಮಾತೆಯ ಮಕ್ಕಳೆಲ್ಲಾ ಒಂದೇ ಎಂಬ ಭಾವನೆ ಬೆಳೆದು ಮಾನವೀಯತೆಯನ್ನು ರೂಢಿಸಿಕೊಳ್ಳಬೇಕೆಂದರು.
ಅಲ್ ಹಾಜ್‌ ಕೆ.ಪಿ.ಇರ್ಷಾದ್ ದಾರಿಮಿ ಮಿತ್ತಬೈಲ್ ಅತಿಥಿ ಯಾಗಿ ಉಪಸ್ಥಿತರಿದ್ದರು.
ಅತಿಥಿಗಳನ್ನು ಚೆಂಡೆವಾದನದೊಂದಿಗೆ‌ ಸಭಾ ವೇದಿಕೆಗೆ ಸ್ವಾಗತಿಸಲಾಯಿತು.
ಫೆಸ್ಟ್ ಸಂಯೋಜಕರಾದ ಬಿ.ಎಂ.ಅಶ್ರಫ್, ತುಂಬೆ ‌ಬಿ.ಎ.ಗ್ರೂಪ್ ಎಂ.ಡಿ. ಬಿ.ಅಬ್ದುಲ್ ಸಲಾಂ, ಐಟಿಐ ಕಾಲೇಜಿನ ಪ್ರಾಂಶುಪಾಲ ನವೀನ ಕುಮಾರ್ ಕೆ.ಎಸ್‌., ಪಿಯು ಕಾಲೇಜು ಪ್ರಾಂಶುಪಾಲ ಸುಬ್ರಹ್ಮಣ್ಯ ಭಟ್, ಶಿಕ್ಷಕರಾದ ಜಗದೀಶ ರೈ, ಸಾಯಿ ರಾಮ್ , ದಿನೇಶ್ ಶೆಟ್ಟಿ ಮೊದಲಾದವರಿದ್ದರು.
ಮೇಳದಲ್ಲಿ ಯೇನೆಪೋಯ ಮಹಿಳಾ ಆರೋಗ್ಯ ಸಂಚಾರಿ ಆಸ್ಪತ್ರೆಯ ವತಿಯಿಂದ ಆರೋಗ್ಯ ತಪಾಸಣೆ, ತೋಟಗಾರಿಕಾ ಇಲಾಖೆಯ ಯಂತ್ರೋಪಕರಣ ಪ್ರದರ್ಶನ, ಸಿರಿಧಾನ್ಯ ಮಾರಾಟ, ಸ್ತ್ರೀ ಶಕ್ತಿ ಸಂಘಟನೆಯ ವಿವಿಧ ಮಳಿಗೆಗಳು ಗಮನ ಸೆಳೆದವು. ಯೇನೆಪೋಯ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು