1:37 AM Friday29 - May 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

ಇತ್ತೀಚಿನ ಸುದ್ದಿ

Mumbai Attack | ಮುಂಬೈ ದಾಳಿಯ ಮಾಸ್ಟರ್ ಮೈಂಡ್ ರಾಣಾ ಭಾರತಕ್ಕೆ ಹಸ್ತಾಂತರ: ಮೋದಿ ಸರಕಾರ ಶ್ಲಾಘಿಸಿದ ಕಾಂಗ್ರೆಸ್ ನಾಯಕ ಶಿಂಧೆ

12/04/2025, 15:03

ನವದೆಹಲಿ(reporterkarnataka.com): 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ತಹವ್ವೂರ್ ರಾಣಾನನ್ನು ಭಾರತಕ್ಕೆ ಕರೆದು ತಂದಿರುವ ಕುರಿತು ಹರ್ಷ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವನ್ನು ಶ್ಲಾಘಿಸಿದ್ದಾರೆ.
ನಾವು ಆತನನ್ನು ಕರೆತರಲು ಪ್ರಯತ್ನಿಸಿದ್ದೆವು.ಬಿಜೆಪಿ ಸರ್ಕಾರ ಕೂಡ ಅವರನ್ನು ಭಾರತಕ್ಕೆ ಮರಳಿ ಕರೆತರಲು ಬಹಳ ಸಮಯದಿಂದ ಪ್ರಯತ್ನಿಸುತ್ತಿತ್ತು. ಈಗ ನಾವು ಅವನನ್ನು ಮರಳಿ ಕರೆತರುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಶಿಂಧೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಎನ್‌ಐಎ ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸುತ್ತದೆ ಎಂಬ ವಿಶ್ವಾಸವಿದೆ. ಪ್ರಧಾನಿ ಮೋದಿ ಆಗಲಿ ಅಥವಾ ಭಾರತ ಸರ್ಕಾರವಾಗಲಿ, ಹೇಗಾದರೂ ತಹವ್ವೂರ್‌ನನ್ನು ಇಲ್ಲಿಗೆ ಕರೆದು ತಂದಿರುವುದು ಸಂತೋಷದ ವಿಷಯ ಎಂದು ಶಿಂಧೆ ಹೇಳಿದ್ದಾರೆ.
ತನಿಖೆಯ ನಂತರ ಎಲ್ಲಾ ಸತ್ಯ ಹೊರಬರುತ್ತದೆ. ಈ ಸರ್ಕಾರ ಒಳ್ಳೆಯ ಕೆಲಸ ಮಾಡಿದೆ. ನಾವು ಕೇಂದ್ರ ಸರ್ಕಾರವನ್ನು ಹೊಗಳುತ್ತೇವೆ. ಆದರೆ ಅವರನ್ನು ಹೊಗಳುವುದರಲ್ಲಿ ಯಾವುದೇ ತಪ್ಪಿಲ್ಲ. ಏಕೆಂದರೆ ಇದು ದೀರ್ಘಕಾಲದ ಸಮಸ್ಯೆಯಾಗಿತ್ತು ಎಂದು ಮಾಜಿ ಗೃಹ ಸಚಿವರೂ ಆಗಿರುವ ಶಿಂಧೆ ನುಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು