3:35 PM Friday27 - February 2026
ಬ್ರೇಕಿಂಗ್ ನ್ಯೂಸ್
ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು…

ಇತ್ತೀಚಿನ ಸುದ್ದಿ

Mumbai Attack | ಮುಂಬೈ ದಾಳಿಯ ಮಾಸ್ಟರ್ ಮೈಂಡ್ ರಾಣಾ ಭಾರತಕ್ಕೆ ಹಸ್ತಾಂತರ: ಮೋದಿ ಸರಕಾರ ಶ್ಲಾಘಿಸಿದ ಕಾಂಗ್ರೆಸ್ ನಾಯಕ ಶಿಂಧೆ

12/04/2025, 15:03

ನವದೆಹಲಿ(reporterkarnataka.com): 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ತಹವ್ವೂರ್ ರಾಣಾನನ್ನು ಭಾರತಕ್ಕೆ ಕರೆದು ತಂದಿರುವ ಕುರಿತು ಹರ್ಷ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವನ್ನು ಶ್ಲಾಘಿಸಿದ್ದಾರೆ.
ನಾವು ಆತನನ್ನು ಕರೆತರಲು ಪ್ರಯತ್ನಿಸಿದ್ದೆವು.ಬಿಜೆಪಿ ಸರ್ಕಾರ ಕೂಡ ಅವರನ್ನು ಭಾರತಕ್ಕೆ ಮರಳಿ ಕರೆತರಲು ಬಹಳ ಸಮಯದಿಂದ ಪ್ರಯತ್ನಿಸುತ್ತಿತ್ತು. ಈಗ ನಾವು ಅವನನ್ನು ಮರಳಿ ಕರೆತರುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಶಿಂಧೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಎನ್‌ಐಎ ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸುತ್ತದೆ ಎಂಬ ವಿಶ್ವಾಸವಿದೆ. ಪ್ರಧಾನಿ ಮೋದಿ ಆಗಲಿ ಅಥವಾ ಭಾರತ ಸರ್ಕಾರವಾಗಲಿ, ಹೇಗಾದರೂ ತಹವ್ವೂರ್‌ನನ್ನು ಇಲ್ಲಿಗೆ ಕರೆದು ತಂದಿರುವುದು ಸಂತೋಷದ ವಿಷಯ ಎಂದು ಶಿಂಧೆ ಹೇಳಿದ್ದಾರೆ.
ತನಿಖೆಯ ನಂತರ ಎಲ್ಲಾ ಸತ್ಯ ಹೊರಬರುತ್ತದೆ. ಈ ಸರ್ಕಾರ ಒಳ್ಳೆಯ ಕೆಲಸ ಮಾಡಿದೆ. ನಾವು ಕೇಂದ್ರ ಸರ್ಕಾರವನ್ನು ಹೊಗಳುತ್ತೇವೆ. ಆದರೆ ಅವರನ್ನು ಹೊಗಳುವುದರಲ್ಲಿ ಯಾವುದೇ ತಪ್ಪಿಲ್ಲ. ಏಕೆಂದರೆ ಇದು ದೀರ್ಘಕಾಲದ ಸಮಸ್ಯೆಯಾಗಿತ್ತು ಎಂದು ಮಾಜಿ ಗೃಹ ಸಚಿವರೂ ಆಗಿರುವ ಶಿಂಧೆ ನುಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು