7:16 AM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

Mumbai Attack | ಮುಂಬೈ ದಾಳಿಯ ಮಾಸ್ಟರ್ ಮೈಂಡ್ ರಾಣಾ ಭಾರತಕ್ಕೆ ಹಸ್ತಾಂತರ: ಮೋದಿ ಸರಕಾರ ಶ್ಲಾಘಿಸಿದ ಕಾಂಗ್ರೆಸ್ ನಾಯಕ ಶಿಂಧೆ

12/04/2025, 15:03

ನವದೆಹಲಿ(reporterkarnataka.com): 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ತಹವ್ವೂರ್ ರಾಣಾನನ್ನು ಭಾರತಕ್ಕೆ ಕರೆದು ತಂದಿರುವ ಕುರಿತು ಹರ್ಷ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವನ್ನು ಶ್ಲಾಘಿಸಿದ್ದಾರೆ.
ನಾವು ಆತನನ್ನು ಕರೆತರಲು ಪ್ರಯತ್ನಿಸಿದ್ದೆವು.ಬಿಜೆಪಿ ಸರ್ಕಾರ ಕೂಡ ಅವರನ್ನು ಭಾರತಕ್ಕೆ ಮರಳಿ ಕರೆತರಲು ಬಹಳ ಸಮಯದಿಂದ ಪ್ರಯತ್ನಿಸುತ್ತಿತ್ತು. ಈಗ ನಾವು ಅವನನ್ನು ಮರಳಿ ಕರೆತರುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಶಿಂಧೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಎನ್‌ಐಎ ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸುತ್ತದೆ ಎಂಬ ವಿಶ್ವಾಸವಿದೆ. ಪ್ರಧಾನಿ ಮೋದಿ ಆಗಲಿ ಅಥವಾ ಭಾರತ ಸರ್ಕಾರವಾಗಲಿ, ಹೇಗಾದರೂ ತಹವ್ವೂರ್‌ನನ್ನು ಇಲ್ಲಿಗೆ ಕರೆದು ತಂದಿರುವುದು ಸಂತೋಷದ ವಿಷಯ ಎಂದು ಶಿಂಧೆ ಹೇಳಿದ್ದಾರೆ.
ತನಿಖೆಯ ನಂತರ ಎಲ್ಲಾ ಸತ್ಯ ಹೊರಬರುತ್ತದೆ. ಈ ಸರ್ಕಾರ ಒಳ್ಳೆಯ ಕೆಲಸ ಮಾಡಿದೆ. ನಾವು ಕೇಂದ್ರ ಸರ್ಕಾರವನ್ನು ಹೊಗಳುತ್ತೇವೆ. ಆದರೆ ಅವರನ್ನು ಹೊಗಳುವುದರಲ್ಲಿ ಯಾವುದೇ ತಪ್ಪಿಲ್ಲ. ಏಕೆಂದರೆ ಇದು ದೀರ್ಘಕಾಲದ ಸಮಸ್ಯೆಯಾಗಿತ್ತು ಎಂದು ಮಾಜಿ ಗೃಹ ಸಚಿವರೂ ಆಗಿರುವ ಶಿಂಧೆ ನುಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು