5:58 AM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

Mumbai Attack | ಮುಂಬೈ ದಾಳಿಯ ಮಾಸ್ಟರ್ ಮೈಂಡ್ ರಾಣಾ ಭಾರತಕ್ಕೆ ಹಸ್ತಾಂತರ: ಮೋದಿ ಸರಕಾರ ಶ್ಲಾಘಿಸಿದ ಕಾಂಗ್ರೆಸ್ ನಾಯಕ ಶಿಂಧೆ

12/04/2025, 15:03

ನವದೆಹಲಿ(reporterkarnataka.com): 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ತಹವ್ವೂರ್ ರಾಣಾನನ್ನು ಭಾರತಕ್ಕೆ ಕರೆದು ತಂದಿರುವ ಕುರಿತು ಹರ್ಷ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವನ್ನು ಶ್ಲಾಘಿಸಿದ್ದಾರೆ.
ನಾವು ಆತನನ್ನು ಕರೆತರಲು ಪ್ರಯತ್ನಿಸಿದ್ದೆವು.ಬಿಜೆಪಿ ಸರ್ಕಾರ ಕೂಡ ಅವರನ್ನು ಭಾರತಕ್ಕೆ ಮರಳಿ ಕರೆತರಲು ಬಹಳ ಸಮಯದಿಂದ ಪ್ರಯತ್ನಿಸುತ್ತಿತ್ತು. ಈಗ ನಾವು ಅವನನ್ನು ಮರಳಿ ಕರೆತರುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಶಿಂಧೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಎನ್‌ಐಎ ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸುತ್ತದೆ ಎಂಬ ವಿಶ್ವಾಸವಿದೆ. ಪ್ರಧಾನಿ ಮೋದಿ ಆಗಲಿ ಅಥವಾ ಭಾರತ ಸರ್ಕಾರವಾಗಲಿ, ಹೇಗಾದರೂ ತಹವ್ವೂರ್‌ನನ್ನು ಇಲ್ಲಿಗೆ ಕರೆದು ತಂದಿರುವುದು ಸಂತೋಷದ ವಿಷಯ ಎಂದು ಶಿಂಧೆ ಹೇಳಿದ್ದಾರೆ.
ತನಿಖೆಯ ನಂತರ ಎಲ್ಲಾ ಸತ್ಯ ಹೊರಬರುತ್ತದೆ. ಈ ಸರ್ಕಾರ ಒಳ್ಳೆಯ ಕೆಲಸ ಮಾಡಿದೆ. ನಾವು ಕೇಂದ್ರ ಸರ್ಕಾರವನ್ನು ಹೊಗಳುತ್ತೇವೆ. ಆದರೆ ಅವರನ್ನು ಹೊಗಳುವುದರಲ್ಲಿ ಯಾವುದೇ ತಪ್ಪಿಲ್ಲ. ಏಕೆಂದರೆ ಇದು ದೀರ್ಘಕಾಲದ ಸಮಸ್ಯೆಯಾಗಿತ್ತು ಎಂದು ಮಾಜಿ ಗೃಹ ಸಚಿವರೂ ಆಗಿರುವ ಶಿಂಧೆ ನುಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು