12:54 AM Monday30 - June 2025
ಬ್ರೇಕಿಂಗ್ ನ್ಯೂಸ್
ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:…

ಇತ್ತೀಚಿನ ಸುದ್ದಿ

ಮಹಾಲಕ್ಷ್ಮಿಪುರಂ ಬಿಜಿಎಸ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ದೇವಾಲಯದಲ್ಲಿ ಆಂಜನೇಯ, ಮಹಾಗಣಪತಿ ಲಲಿತಾಂಬಿಕೆ ಪ್ರತಿಷ್ಠಾಪನೆ

14/04/2025, 16:42

ಬೆಂಗಳೂರು(reporterkarnataka.com): ಮಹಾಲಕ್ಷ್ಮಿಪುರಂನಲ್ಲಿರುವ ಬಿಜಿಎಸ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ದೇವಾಲಯದಲ್ಲಿ ಶ್ರೀ ಅಭಯ ಆಂಜನೇಯ, ಮಹಾಗಣಪತಿ ಮತ್ತು ಲಲಿತಾಂಬಿಕೆ ದೇವರುಗಳನ್ನು ಪ್ರತಿಷ್ಠಾಪಿಸಲಾಯಿತು.


ಕಾರ್ಯಕ್ರಮಕ್ಕೆ ವಿಜಯನಗರ ಆದಿ ಚುಂಚನಗಿರಿ ಮಠದಿಂದ ಆಂಜನೇಯಸ್ವಾಮಿ ದೇವರ ವಿಗ್ರಹವನ್ನು ಮೆರವಣಿಗೆಯಲ್ಲಿ ಶಂಕರ ಮಠ ವೃತ್ತ ಕ್ಕೆ ಬಂದ ಮೆರವಣಿಗೆಯನ್ನು ಶ್ರೀ ಜಗದ್ಗುರು ನಿರ್ಮಾಲಾನಂದ ನಾಥ ಸ್ವಾಮೀಜಿಗಳು, ಆವನೀ ಶೃಂಗೇರಿ ಶಾಖಾ ಮಠದ ಶ್ರೀ ಅದ್ವೈತಾನಂದ ಸ್ವಾಮೀಜಿ, ವಿಜಯನಗರ ಚುಂಚನಗಿರಿ ಶಾಖಾಮಠದ ಸೌಮ್ಯನಾಥ ಸ್ವಾಮೀಜಿ ಹಾಗೂ ಶಾಸಕ ಕೆ. ಗೋಪಾಲಯ್ಯ ಅವರು ಬರಮಾಡಿಕೊಂಡರು. ಅಲ್ಲಿಂದ 500ಕ್ಕೂ ಹೆಚ್ಚು ಕಳಸ ಹೊತ್ತ ಮಹಿಳೆಯರೊಂದಿಗೆ ಚಂಡೆ ಮೇಳ, ಕೊಂಬು ಕಹಳೆ, ಕಲಾತಂಡ ಹಾಗೂ ಭೂತದ ಕೋಲ , ಶ್ರೀರಾಮ ,ಹನುಮ , ಲಕ್ಷ್ಮಣ ,ದೇಶಭೂಷಣ ತೊಟ್ಟ ಕಲಾವಿರು ಹಾಗೂ ಸಾವಿರಾರು ಭಕ್ತರು ಕ್ಷೇತ್ರದ ಮುಖಂಡರುಗಳು ಒಳಗೊಂಡ ಮೆರವಣಿಗೆ ನಾಗಪುರದಲ್ಲಿರುವ ಬಿಜಿಎಸ್ ಶಾಲಾ ಅವರಣದಲ್ಲಿ ಸಮಾವೇಶಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು