10:37 AM Wednesday18 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ಮಹಾಲಕ್ಷ್ಮಿಪುರಂ ಬಿಜಿಎಸ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ದೇವಾಲಯದಲ್ಲಿ ಆಂಜನೇಯ, ಮಹಾಗಣಪತಿ ಲಲಿತಾಂಬಿಕೆ ಪ್ರತಿಷ್ಠಾಪನೆ

14/04/2025, 16:42

ಬೆಂಗಳೂರು(reporterkarnataka.com): ಮಹಾಲಕ್ಷ್ಮಿಪುರಂನಲ್ಲಿರುವ ಬಿಜಿಎಸ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ದೇವಾಲಯದಲ್ಲಿ ಶ್ರೀ ಅಭಯ ಆಂಜನೇಯ, ಮಹಾಗಣಪತಿ ಮತ್ತು ಲಲಿತಾಂಬಿಕೆ ದೇವರುಗಳನ್ನು ಪ್ರತಿಷ್ಠಾಪಿಸಲಾಯಿತು.


ಕಾರ್ಯಕ್ರಮಕ್ಕೆ ವಿಜಯನಗರ ಆದಿ ಚುಂಚನಗಿರಿ ಮಠದಿಂದ ಆಂಜನೇಯಸ್ವಾಮಿ ದೇವರ ವಿಗ್ರಹವನ್ನು ಮೆರವಣಿಗೆಯಲ್ಲಿ ಶಂಕರ ಮಠ ವೃತ್ತ ಕ್ಕೆ ಬಂದ ಮೆರವಣಿಗೆಯನ್ನು ಶ್ರೀ ಜಗದ್ಗುರು ನಿರ್ಮಾಲಾನಂದ ನಾಥ ಸ್ವಾಮೀಜಿಗಳು, ಆವನೀ ಶೃಂಗೇರಿ ಶಾಖಾ ಮಠದ ಶ್ರೀ ಅದ್ವೈತಾನಂದ ಸ್ವಾಮೀಜಿ, ವಿಜಯನಗರ ಚುಂಚನಗಿರಿ ಶಾಖಾಮಠದ ಸೌಮ್ಯನಾಥ ಸ್ವಾಮೀಜಿ ಹಾಗೂ ಶಾಸಕ ಕೆ. ಗೋಪಾಲಯ್ಯ ಅವರು ಬರಮಾಡಿಕೊಂಡರು. ಅಲ್ಲಿಂದ 500ಕ್ಕೂ ಹೆಚ್ಚು ಕಳಸ ಹೊತ್ತ ಮಹಿಳೆಯರೊಂದಿಗೆ ಚಂಡೆ ಮೇಳ, ಕೊಂಬು ಕಹಳೆ, ಕಲಾತಂಡ ಹಾಗೂ ಭೂತದ ಕೋಲ , ಶ್ರೀರಾಮ ,ಹನುಮ , ಲಕ್ಷ್ಮಣ ,ದೇಶಭೂಷಣ ತೊಟ್ಟ ಕಲಾವಿರು ಹಾಗೂ ಸಾವಿರಾರು ಭಕ್ತರು ಕ್ಷೇತ್ರದ ಮುಖಂಡರುಗಳು ಒಳಗೊಂಡ ಮೆರವಣಿಗೆ ನಾಗಪುರದಲ್ಲಿರುವ ಬಿಜಿಎಸ್ ಶಾಲಾ ಅವರಣದಲ್ಲಿ ಸಮಾವೇಶಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು