9:01 AM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವ: ಭಕ್ತರಿಗೆ ಭೋಜನ ಬಡಿಸಿದ ಶಾಸಕ ಅಶೋಕ ಕುಮಾರ್ ರೈ

14/04/2025, 20:26

ಜಯಾನಂದ ಪೆರಾಜೆ ಪುತ್ತೂರು

info.reporterkarnataka@gmail.com

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ 4ನೇ ದಿನ ಮಧ್ಯಾಹ್ನ ಸುಮಾರು 15,000 ಭಕ್ತರು ಅನ್ನಪ್ರಸಾದ ಸ್ವೀಕರಿಸಿ ಸಂತೃಪ್ತಿಪಟ್ಟರು.


ಮಧ್ಯಾಹ್ನ 12 ಗಂಟೆಗೆ ಅನ್ನ ಸಂತರ್ಪಣೆ ಆರಂಭವಾಗಿ ಕುಳಿತು ಊಟ ಮಾಡುವ ಮತ್ತು ಬಫೆಯಲ್ಲಿ ರುಚಿಕರವಾದ ಊಟದ ವ್ಯವಸ್ಥೆ ಮಾಡಲಾಗಿತ್ತು. ಯಾವುದೇ ನೂಕುನುಗ್ಗಲು ಇರಲಿಲ್ಲ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮೇಲುಸ್ತುವಾರಿಯಲ್ಲಿ ಶಿಸ್ತುಬದ್ಧವಾದ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲೆ ಮಾತ್ರವಲ್ಲದೆ ಹೊರಜಿಲ್ಲೆಗಳಾದ ಮೈಸೂರು ಮಂಡ್ಯ ಜಿಲ್ಲೆಗಳಿಂದಲೂ ಹೊರೆಕಾಣಿಕೆ ಬಂದಿರುವುದಾಗಿ ತಿಳಿಸಿದರು.
*ಶಾಸಕರ ಭೇಟಿ* ಮಧ್ಯಾಹ್ನ ದೇವಸ್ಥಾನಕ್ಕೆ ಪುತ್ತೂರು ಶಾಸಕ ಅಶೋಕ ರೈ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಅನ್ನಛತ್ರಕ್ಕೆ ತೆರಳಿ ವ್ಯವಸ್ಥೆಯನ್ನು ವೀಕ್ಷಿಸಿ ಸ್ವಚ್ಚತೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಸರತಿ ಸಾಲಿನಲ್ಲಿ ನಿಂತು ಬಫೆ ಊಟ ಸ್ವೀಕರಿಸಿದರು. ಬಳಿಕ ಸ್ವತಃ ಸ್ವಯಂಸೇವಕರ ಜೊತೆ ಸೇರಿ ಅನ್ನ ಬಡಿಸಿ ಗಮನ ಸೆಳೆದರು.
*ಯಾತ್ರಾರ್ಥಿಗಳಿಗೆ ಅನುಕೂಲ:*
ಎರಡು ವರ್ಷಗಳಲ್ಲಿ ಮಹಾಲಿಂಗೇಶ್ವರ ದೇವಸ್ಥಾನ ವನ್ನು ಪ್ರಸಿದ್ಧ ಯಾತ್ರಾಸ್ಥಳವನ್ನಾಗಿ ಮಾರ್ಪಡಿಸಲಾಗುವುದು‌ ಎಂದು ಸುದ್ದಿಗಾರರೊಂದಿಗೆ ಮತನಾಡುತ್ತಾ ತಿಳಿಸಿದರು. ಅಕ್ರಮವಾಗಿದ್ದ ಸ್ಥಳವು ಮಹಾಲಿಂಗೇಶ್ವರ ದೇವರಿಗೆ ಸಮರ್ಪಣೆಯಾಗಿದೆ. ಮುಂದಿನ ದಿನಗಳಲ್ಲಿ ಯಾತ್ರಾರ್ಥಿಗಳಿಗೆ ಬೇಕಾದ ಅನುಕೂಲಗಳನ್ನು ಮಾಡಿಕೊಡಲಾಗುವುದು ಎಂದರು.
ಪ್ರಸಿದ್ಧವಾದ ಕೆರೆಯನ್ನು ಸಂರಕ್ಷಿಸಿ ಭೋಜನಾ ಶಾಲೆ, ವಸತಿ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳಾಗಲಿವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು