2:50 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವ: ಭಕ್ತರಿಗೆ ಭೋಜನ ಬಡಿಸಿದ ಶಾಸಕ ಅಶೋಕ ಕುಮಾರ್ ರೈ

14/04/2025, 20:26

ಜಯಾನಂದ ಪೆರಾಜೆ ಪುತ್ತೂರು

info.reporterkarnataka@gmail.com

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ 4ನೇ ದಿನ ಮಧ್ಯಾಹ್ನ ಸುಮಾರು 15,000 ಭಕ್ತರು ಅನ್ನಪ್ರಸಾದ ಸ್ವೀಕರಿಸಿ ಸಂತೃಪ್ತಿಪಟ್ಟರು.


ಮಧ್ಯಾಹ್ನ 12 ಗಂಟೆಗೆ ಅನ್ನ ಸಂತರ್ಪಣೆ ಆರಂಭವಾಗಿ ಕುಳಿತು ಊಟ ಮಾಡುವ ಮತ್ತು ಬಫೆಯಲ್ಲಿ ರುಚಿಕರವಾದ ಊಟದ ವ್ಯವಸ್ಥೆ ಮಾಡಲಾಗಿತ್ತು. ಯಾವುದೇ ನೂಕುನುಗ್ಗಲು ಇರಲಿಲ್ಲ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮೇಲುಸ್ತುವಾರಿಯಲ್ಲಿ ಶಿಸ್ತುಬದ್ಧವಾದ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲೆ ಮಾತ್ರವಲ್ಲದೆ ಹೊರಜಿಲ್ಲೆಗಳಾದ ಮೈಸೂರು ಮಂಡ್ಯ ಜಿಲ್ಲೆಗಳಿಂದಲೂ ಹೊರೆಕಾಣಿಕೆ ಬಂದಿರುವುದಾಗಿ ತಿಳಿಸಿದರು.
*ಶಾಸಕರ ಭೇಟಿ* ಮಧ್ಯಾಹ್ನ ದೇವಸ್ಥಾನಕ್ಕೆ ಪುತ್ತೂರು ಶಾಸಕ ಅಶೋಕ ರೈ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಅನ್ನಛತ್ರಕ್ಕೆ ತೆರಳಿ ವ್ಯವಸ್ಥೆಯನ್ನು ವೀಕ್ಷಿಸಿ ಸ್ವಚ್ಚತೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಸರತಿ ಸಾಲಿನಲ್ಲಿ ನಿಂತು ಬಫೆ ಊಟ ಸ್ವೀಕರಿಸಿದರು. ಬಳಿಕ ಸ್ವತಃ ಸ್ವಯಂಸೇವಕರ ಜೊತೆ ಸೇರಿ ಅನ್ನ ಬಡಿಸಿ ಗಮನ ಸೆಳೆದರು.
*ಯಾತ್ರಾರ್ಥಿಗಳಿಗೆ ಅನುಕೂಲ:*
ಎರಡು ವರ್ಷಗಳಲ್ಲಿ ಮಹಾಲಿಂಗೇಶ್ವರ ದೇವಸ್ಥಾನ ವನ್ನು ಪ್ರಸಿದ್ಧ ಯಾತ್ರಾಸ್ಥಳವನ್ನಾಗಿ ಮಾರ್ಪಡಿಸಲಾಗುವುದು‌ ಎಂದು ಸುದ್ದಿಗಾರರೊಂದಿಗೆ ಮತನಾಡುತ್ತಾ ತಿಳಿಸಿದರು. ಅಕ್ರಮವಾಗಿದ್ದ ಸ್ಥಳವು ಮಹಾಲಿಂಗೇಶ್ವರ ದೇವರಿಗೆ ಸಮರ್ಪಣೆಯಾಗಿದೆ. ಮುಂದಿನ ದಿನಗಳಲ್ಲಿ ಯಾತ್ರಾರ್ಥಿಗಳಿಗೆ ಬೇಕಾದ ಅನುಕೂಲಗಳನ್ನು ಮಾಡಿಕೊಡಲಾಗುವುದು ಎಂದರು.
ಪ್ರಸಿದ್ಧವಾದ ಕೆರೆಯನ್ನು ಸಂರಕ್ಷಿಸಿ ಭೋಜನಾ ಶಾಲೆ, ವಸತಿ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳಾಗಲಿವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು