12:23 AM Tuesday12 - May 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ… ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್: ಸಿಐಡಿ ತನಿಖೆ

ಇತ್ತೀಚಿನ ಸುದ್ದಿ

German | ಎಐ, ಕ್ವಾಂಟಂ, ಸೈಬರ್ ಸೆಕ್ಯುರಿಟಿ ಸಹಕಾರಕ್ಕೆ ಬವೇರಿಯಾ ಜತೆ ರಾಜ್ಯದ ಒಡಂಬಡಿಕೆ

16/04/2025, 00:05

ಬೆಂಗಳೂರು(reporterkarnataka.com): ಎಐ, ಕ್ವಾಂಟಂ ತಂತ್ರಜ್ಞಾನ, ಬಿಟಿ, ಸ್ಮಾರ್ಟ್ ಸಿಟಿ, ಉನ್ನತ ಶಿಕ್ಷಣ ಮತ್ತು ಸುಸ್ಥಿರ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದ ಉದ್ದೇಶದಿಂದ ಜರ್ಮನಿಯ ಬವೇರಿಯಾ ಪ್ರಾಂತ್ಯ ಮತ್ತು ರಾಜ್ಯ ಸರಕಾರಗಳು ವಿಧಾನ ಸೌಧದಲ್ಲಿ ಒಡಂಬಡಿಕೆಗೆ ಅಂಕಿತ ಹಾಕಿದವು.
ರಾಜ್ಯ ಸರಕಾರದ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮತ್ತು ಬವೇರಿಯಾ ಪರವಾಗಿ ಅಲ್ಲಿಯ ಚಾನ್ಸಲರಿ ಮುಖ್ಯಸ್ಥ ಡಾ.ಪ್ಲೋರಿಯನ್ ಹರ್ಮನ್ ಸಹಿ ಹಾಕಿದರು. ಈ ಸಂದರ್ಭದಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, `ಈ ಒಡಂಬಡಿಕೆಯು ಮುಂದಿನ 5 ವರ್ಷಗಳ ಕಾಲ ಚಾಲ್ತಿಯಲ್ಲಿರುತ್ತದೆ. ಇದರ ಅನ್ವಯ ಇಂಡಸ್ಟ್ರಿ 4.0, ವೈಮಾಂತರಿಕ್ಷ, ವೈದ್ಯಕೀಯ ತಂತ್ರಜ್ಞಾನ, ಪರಿಸರ ತಂತ್ರಜ್ಞಾನ, ನಗರ ಮೂಲಸೌಕರ್ಯ, ಕೌಶಲ್ಯಾಭಿವೃದ್ಧಿ ಮತ್ತು ನೇಮಕ, ಉದ್ಯಮಶೀಲತೆ, ಸೈಬರ್ ಸೆಕ್ಯುರಿಟಿ ಕ್ಷೇತ್ರಗಳಲ್ಲೂ ಪರಸ್ಪರ ಸಹಕಾರ ಸ್ಥಾಪನೆಯಾಗಲಿದೆ’ ಎಂದಿದ್ದಾರೆ.
ಬವೇರಿಯಾದ ಸಚಿವರಿಗೆ ರಾಜ್ಯದ ಕೈಗಾರಿಕಾ ಕಾರ್ಯಪರಿಸರದ ಬಗ್ಗೆ ಸಾದ್ಯಂತವಾಗಿ ತಿಳಿಸಿ, ಹೂಡಿಕೆಗೆ ಅವಕಾಶವಿರುವ ಕ್ಷೇತ್ರಗಳತ್ತ ಗಮನ ಸೆಳೆಯಲಾಯಿತು. ಜತೆಗೆ ಕೌಶಲ್ಯಾಭಿವೃದ್ಧಿಯಂಥ ನಿರ್ದಿಷ್ಟ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ವರ್ಕಿಂಗ್ ಗ್ರೂಪ್ ರಚಿಸುವ ಬಗ್ಗೆ ತೀರ್ಮಾನಿಸಲಾಯಿತು. ಬವೇರಿಯಾ ಪ್ರಾಂತ್ಯವು 2007ರಿಂದಲೂ ರಾಜ್ಯದೊಂದಿಗೆ ವಾಣಿಜ್ಯ ಸಂಬಂಧವನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಬವೇರಿಯಾ ಪ್ರಾಂತೀಯ ಸರಕಾರದ ಪ್ರತಿನಿಧಿ ಮಟ್ಟದ ಕಚೇರಿ 2001ರಿಂದಲೂ ಕಾರ್ಯ ನಿರ್ವಹಿಸುತ್ತಿದೆ. ಈಗಿನ ಹೊಸ ಒಡಂಬಡಿಕೆಯಿಂದ ರಾಜ್ಯ ಮತ್ತು ಬವೇರಿಯಾ ನಡುವಿನ ಬಾಂಧವ್ಯ ಮತ್ತೊಂದು ಮಜಲನ್ನು ಕಾಣಲಿದೆ. ವಿಜ್ಞಾನ ಮತ್ತು ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿ 2013ರಿಂದಲೂ ದ್ವಿಪಕ್ಷೀಯ ಸಹಕಾರವಿದೆ. ಇನ್ನು ಮುಂದೆ ಬಾಹ್ಯಾಕಾಶ, ಎಲೆಕ್ಟ್ರಾನಿಕ್ಸ್ ಮತ್ತು ರಕ್ಷಣಾ ವಲಯಗಳ ಬಗ್ಗೆ ಗಮನ ಹರಿಸಲು ಹೆಚ್ಚಿನ ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ.


ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, `ರಾಜ್ಯದ ಐಟಿ-ಬಿಟಿ ಇಲಾಖೆಯು ನವೋದ್ಯಮ ಕ್ಷೇತ್ರದಲ್ಲಿ ಜರ್ಮನಿಯೊಂದಿಗೆ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಸಂಶೋಧನೆ, ಯೂನಿಕಾರ್ನ್ ಶ್ರೇಣಿಯ ನವೋದ್ಯಮಗಳು ಸಮೃದ್ಧವಾಗಿವೆ. ಯಾವುದಾದರೂ ವಲಯದಲ್ಲಿ ರಾಜ್ಯದ ಯುವಜನರು ಜರ್ಮನ್ ಭಾಷೆ ಕಲಿಯುವುದು ಅಗತ್ಯವೆನಿಸಿದರೆ ಅದಕ್ಕೂ ವ್ಯವಸ್ಥೆ ಮಾಡಲಾಗುವುದು. ಬವೇರಿಯಾ ಪ್ರಾಂತೀಯ ಸರಕಾರವು ಈ ಬಗ್ಗೆ ನಮ್ಮ ಗಮನಕ್ಕೆ ತರಬಹುದು’ ಎಂದಿದ್ದಾರೆ.
ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಸತ್ಯವತಿ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು