3:39 PM Wednesday7 - January 2026
ಬ್ರೇಕಿಂಗ್ ನ್ಯೂಸ್
ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

16/04/2025, 11:45

ಪುತ್ತೂರು(reporterkarnataka.com): ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಮುಂದಾಳತ್ವದಲ್ಲಿ ರಚಿಸಲಾದ ಭಾರತೀಯ ಸಂವಿಧಾನವು ಪ್ರಜಾಪ್ರಭುತ್ವ, ಸಮಾನತೆ, ಸಾಮಾಜಿಕ ನ್ಯಾಯ ಎಂಬಿತ್ಯಾದಿ ವಿಚಾರಗಳನ್ನು ಪ್ರತಿಪಾದಿಸುತ್ತದೆ. ಸಂವಿಧಾನವನ್ನು ಗೌರವಿಸುವುದು ಹಾಗೂ ರಕ್ಷಿಸುವುದು ವಿದ್ಯಾರ್ಥಿಗಳ ಕರ್ತವ್ಯ ಎಂದು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ||ವಿಜಯ ಕುಮಾರ್ ಎಂ ಅವರು ಹೇಳಿದರು.


ಅವರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕವು ಆಯೋಜಿಸಿದ ‘ಅಂಬೇಡ್ಕರ್ ಜಯಂತಿ’ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಎನ್ಎಸ್ಎಸ್ ಅಧಿಕಾರಿಯಾದ ಡಾ||ಚಂದ್ರಶೇಖರ ಕೆ. ಅವರು ಮಾತನಾಡುತ್ತಾ ” ಸಂವಿಧಾನವು ನಮಗೆ ಹಕ್ಕು ಮತ್ತು ಕರ್ತವ್ಯಗಳು ಎರಡನ್ನೂ ಕೊಟ್ಟಿದೆ. ನಾವು ಹಕ್ಕುಗಳನ್ನು ಹೇಗೆ ಬಯಸುತ್ತೇವೆಯೋ ಅದೇ ರೀತಿ ಕರ್ತವ್ಯಗಳನ್ನು ಪಾಲಿಸುವುದು ಕೂಡ ಅಗತ್ಯ “ಎಂದು ಹೇಳಿದರು.
ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.
‘ಅಂಬೇಡ್ಕರ್ ಮತ್ತು ಸಂವಿಧಾನ’ ಎಂಬ ವಿಷಯದ ಕುರಿತು ಎನ್ಎಸ್ಎಸ್ ಸ್ವಯಂಸೇವಕಿಯರಾದ ಪುಣ್ಯ, ಗಾಯತ್ರಿ, ಲವಿಕಾ ಇವರು ಪ್ರಬಂಧ ಮಂಡನೆ ಮಾಡಿದರು.
ಗ್ರೀಷ್ಮ ಮತ್ತು ತಂಡದವರು ಪ್ರಾರ್ಥಿಸಿ, ಎನ್ಎಸ್ಎಸ್ ಘಟಕ ನಾಯಕಿ ಅರ್ಚನಾ ಕೆ. ಅವರು ಸ್ವಾಗತಿಸಿದರು. ವಿಷ್ಣುಜಿತ್ ಎಂ. ಅವರು ವಂದಿಸಿದರು. ಘಟಕ ನಾಯಕಿ ಕಾವ್ಯ ಎಚ್. ರಾವ್ ಅವರು ನಿರೂಪಿಸಿದರು.
ಎನ್ಎಸ್ಎಸ್ ಅಧಿಕಾರಿ ಪುಷ್ಪಾ ಎನ್., ಘಟಕ ನಾಯಕ ಕೆವಿನ್, ಕಾರ್ಯದರ್ಶಿ ನಿರಂಜನ್, ಉಪನ್ಯಾಸಕರಾದ ಹರ್ಷಿತ್ ಹಾಗೂ ಪೃಥ್ವಿ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು