3:24 AM Friday10 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

16/04/2025, 11:45

ಪುತ್ತೂರು(reporterkarnataka.com): ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಮುಂದಾಳತ್ವದಲ್ಲಿ ರಚಿಸಲಾದ ಭಾರತೀಯ ಸಂವಿಧಾನವು ಪ್ರಜಾಪ್ರಭುತ್ವ, ಸಮಾನತೆ, ಸಾಮಾಜಿಕ ನ್ಯಾಯ ಎಂಬಿತ್ಯಾದಿ ವಿಚಾರಗಳನ್ನು ಪ್ರತಿಪಾದಿಸುತ್ತದೆ. ಸಂವಿಧಾನವನ್ನು ಗೌರವಿಸುವುದು ಹಾಗೂ ರಕ್ಷಿಸುವುದು ವಿದ್ಯಾರ್ಥಿಗಳ ಕರ್ತವ್ಯ ಎಂದು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ||ವಿಜಯ ಕುಮಾರ್ ಎಂ ಅವರು ಹೇಳಿದರು.


ಅವರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕವು ಆಯೋಜಿಸಿದ ‘ಅಂಬೇಡ್ಕರ್ ಜಯಂತಿ’ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಎನ್ಎಸ್ಎಸ್ ಅಧಿಕಾರಿಯಾದ ಡಾ||ಚಂದ್ರಶೇಖರ ಕೆ. ಅವರು ಮಾತನಾಡುತ್ತಾ ” ಸಂವಿಧಾನವು ನಮಗೆ ಹಕ್ಕು ಮತ್ತು ಕರ್ತವ್ಯಗಳು ಎರಡನ್ನೂ ಕೊಟ್ಟಿದೆ. ನಾವು ಹಕ್ಕುಗಳನ್ನು ಹೇಗೆ ಬಯಸುತ್ತೇವೆಯೋ ಅದೇ ರೀತಿ ಕರ್ತವ್ಯಗಳನ್ನು ಪಾಲಿಸುವುದು ಕೂಡ ಅಗತ್ಯ “ಎಂದು ಹೇಳಿದರು.
ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.
‘ಅಂಬೇಡ್ಕರ್ ಮತ್ತು ಸಂವಿಧಾನ’ ಎಂಬ ವಿಷಯದ ಕುರಿತು ಎನ್ಎಸ್ಎಸ್ ಸ್ವಯಂಸೇವಕಿಯರಾದ ಪುಣ್ಯ, ಗಾಯತ್ರಿ, ಲವಿಕಾ ಇವರು ಪ್ರಬಂಧ ಮಂಡನೆ ಮಾಡಿದರು.
ಗ್ರೀಷ್ಮ ಮತ್ತು ತಂಡದವರು ಪ್ರಾರ್ಥಿಸಿ, ಎನ್ಎಸ್ಎಸ್ ಘಟಕ ನಾಯಕಿ ಅರ್ಚನಾ ಕೆ. ಅವರು ಸ್ವಾಗತಿಸಿದರು. ವಿಷ್ಣುಜಿತ್ ಎಂ. ಅವರು ವಂದಿಸಿದರು. ಘಟಕ ನಾಯಕಿ ಕಾವ್ಯ ಎಚ್. ರಾವ್ ಅವರು ನಿರೂಪಿಸಿದರು.
ಎನ್ಎಸ್ಎಸ್ ಅಧಿಕಾರಿ ಪುಷ್ಪಾ ಎನ್., ಘಟಕ ನಾಯಕ ಕೆವಿನ್, ಕಾರ್ಯದರ್ಶಿ ನಿರಂಜನ್, ಉಪನ್ಯಾಸಕರಾದ ಹರ್ಷಿತ್ ಹಾಗೂ ಪೃಥ್ವಿ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು