1:52 PM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

16/04/2025, 11:45

ಪುತ್ತೂರು(reporterkarnataka.com): ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಮುಂದಾಳತ್ವದಲ್ಲಿ ರಚಿಸಲಾದ ಭಾರತೀಯ ಸಂವಿಧಾನವು ಪ್ರಜಾಪ್ರಭುತ್ವ, ಸಮಾನತೆ, ಸಾಮಾಜಿಕ ನ್ಯಾಯ ಎಂಬಿತ್ಯಾದಿ ವಿಚಾರಗಳನ್ನು ಪ್ರತಿಪಾದಿಸುತ್ತದೆ. ಸಂವಿಧಾನವನ್ನು ಗೌರವಿಸುವುದು ಹಾಗೂ ರಕ್ಷಿಸುವುದು ವಿದ್ಯಾರ್ಥಿಗಳ ಕರ್ತವ್ಯ ಎಂದು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ||ವಿಜಯ ಕುಮಾರ್ ಎಂ ಅವರು ಹೇಳಿದರು.


ಅವರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕವು ಆಯೋಜಿಸಿದ ‘ಅಂಬೇಡ್ಕರ್ ಜಯಂತಿ’ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಎನ್ಎಸ್ಎಸ್ ಅಧಿಕಾರಿಯಾದ ಡಾ||ಚಂದ್ರಶೇಖರ ಕೆ. ಅವರು ಮಾತನಾಡುತ್ತಾ ” ಸಂವಿಧಾನವು ನಮಗೆ ಹಕ್ಕು ಮತ್ತು ಕರ್ತವ್ಯಗಳು ಎರಡನ್ನೂ ಕೊಟ್ಟಿದೆ. ನಾವು ಹಕ್ಕುಗಳನ್ನು ಹೇಗೆ ಬಯಸುತ್ತೇವೆಯೋ ಅದೇ ರೀತಿ ಕರ್ತವ್ಯಗಳನ್ನು ಪಾಲಿಸುವುದು ಕೂಡ ಅಗತ್ಯ “ಎಂದು ಹೇಳಿದರು.
ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.
‘ಅಂಬೇಡ್ಕರ್ ಮತ್ತು ಸಂವಿಧಾನ’ ಎಂಬ ವಿಷಯದ ಕುರಿತು ಎನ್ಎಸ್ಎಸ್ ಸ್ವಯಂಸೇವಕಿಯರಾದ ಪುಣ್ಯ, ಗಾಯತ್ರಿ, ಲವಿಕಾ ಇವರು ಪ್ರಬಂಧ ಮಂಡನೆ ಮಾಡಿದರು.
ಗ್ರೀಷ್ಮ ಮತ್ತು ತಂಡದವರು ಪ್ರಾರ್ಥಿಸಿ, ಎನ್ಎಸ್ಎಸ್ ಘಟಕ ನಾಯಕಿ ಅರ್ಚನಾ ಕೆ. ಅವರು ಸ್ವಾಗತಿಸಿದರು. ವಿಷ್ಣುಜಿತ್ ಎಂ. ಅವರು ವಂದಿಸಿದರು. ಘಟಕ ನಾಯಕಿ ಕಾವ್ಯ ಎಚ್. ರಾವ್ ಅವರು ನಿರೂಪಿಸಿದರು.
ಎನ್ಎಸ್ಎಸ್ ಅಧಿಕಾರಿ ಪುಷ್ಪಾ ಎನ್., ಘಟಕ ನಾಯಕ ಕೆವಿನ್, ಕಾರ್ಯದರ್ಶಿ ನಿರಂಜನ್, ಉಪನ್ಯಾಸಕರಾದ ಹರ್ಷಿತ್ ಹಾಗೂ ಪೃಥ್ವಿ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು