9:49 PM Thursday21 - May 2026
ಬ್ರೇಕಿಂಗ್ ನ್ಯೂಸ್
ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:…

ಇತ್ತೀಚಿನ ಸುದ್ದಿ

ಮಾಣಿ ಮಠದಲ್ಲಿ ವಸಂತ ವೇದ ಶಿಬಿರ ಉದ್ಘಾಟನೆ; ಶಿಸ್ತು,ಶ್ರದ್ಧೆ ಕಲಿಕೆಗೆ ಪೂರಕ: ಹಾರಕೆರೆ ನಾರಾಯಣ ಭಟ್

16/04/2025, 11:50

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ವಿದ್ಯಾರ್ಥಿಗಳು ಶಿಸ್ತು ರೂಢಿಸಿಕೊಂಡು ಶ್ರದ್ಧೆಯಿಂದ ಕಲಿಯಬೇಕು. ವೇದ ಶಿಬಿರದಲ್ಲಿ ಆಸಕ್ತಿಯಿಂದ ಭಾಗವಹಿಸಿ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಮಾಣಿ ಪೆರಾಜೆ ಶ್ರೀ ರಾಮಚಂದ್ರಾಪುರ ಮಠದ ಆಡಳಿತ ಸಮಿತಿ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್ ಹೇಳಿದರು.


ಅವರು ಪೆರಾಜೆ ಮಠದಲ್ಲಿ‌ ಏರ್ಪಡಿಸಲಾದ ವಸಂತ ವೇದ ಶಿಬಿರ 2025ರ‌ ಉದ್ಘಾಟನಾ ಸಮಾರಂಭದ‌ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೇ.ಮೂ.ಕಾಂಚನ ಕೃಷ್ಣ ಕುಮಾರ್ ಶಿಬಿರ ಉದ್ಘಾಟಿಸಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ನಮ್ಮ ಪೂರ್ವಜರು ಹಾಕಿಕೊಟ್ಟ ಸಂಸ್ಕಾರದಂತೆ ವೇದಗಳ ಅಧ್ಯಯನ ಮಾಡುವ ಮೂಲಕ ಜ್ಞಾನ ‌ಭಂಡಾರ ಹೆಚ್ಚಿಸಿಕೊಳಬೇಕು. ಕಲಿತ ವಿದ್ಯೆ ಭದ್ರಪಡಿಸಲು ಮತ್ತೆಮತ್ತೆ ಅಧ್ಯಯನ ಮಾಡುವುದು ಅಗತ್ಯ ಎಂದರು.
ಸಂಪನ್ಮೂಲ ವ್ಯಕ್ತಿ ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಲಯದ ಪ್ರಮುಖ ಗುರು ಉಂಡೆಮನೆ ವಿಶ್ವೇಶ್ವರ ಭಟ್ ಮುಖ್ಯ ‌ಅತಿಥಿಯಾಗಿ ಮಾತನಾಡಿದರು. ಮಕ್ಕಳ ಸಾಮರ್ಥ್ಯ ಸದ್ಬಳಕೆಯಾಗುವಂತೆ ಹೆತ್ತವರು ವ್ಯವಸ್ಥೆ ಮಾಡಬೇಕು. ಸೋಲನ್ನೂ ಸವಾಲಾಗಿ ಸ್ವೀಕರಿಸುವ ಧೈರ್ಯವನ್ನು ಮಕ್ಕಳಲ್ಲಿ ಬೆಳೆಸಬೇಕು.ಬುದ್ಧಿ ವಂತಿಕೆಯೊಂದಿಗೆ ಹೃದಯವಂತಿಕೆಯೂ ಮುಖ್ಯವೆಂದರು.
ಯೋಗಶಿಕ್ಷಕ ವೆಂಕಟರಮಣ ಹೆಗಡೆ ಮಾತನಾಡಿ ಯೋಗದ ಮಹತ್ವ ತಿಳಿಸಿದರು.
ಪ್ರಧಾನ ಅರ್ಚಕ ವೇಮೂ. ವಿಘ್ನೇಶ್ವರ ಭಟ್ ,ವೇಮೂ. ಮಿತ್ತೂರು ಸತ್ಯಶಂಕರ ಭಟ್, ಕಾರ್ಯದರ್ಶಿ ಶಿವ ಪ್ರಸಾದ ಉಪಸ್ಥಿತರಿದ್ದರು.
ನಾರಾಯಣ ಭಟ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.
ವೇಮೂ. ಭಾರ್ಗವ ನಾರಾಯಣ ನಿರೂಪಿಸಿದರು. ಸಂಸ್ಕೃತ ಅಧ್ಯಾಪಕ ಶ್ರೀಹರಿ ಭಟ್ ವಂದಿಸಿದರು. ಒಂದು‌ ತಿಂಗಳು 50 ವಿದ್ಯಾರ್ಥಿಗಳಗೆ ವೇದಾಧ್ಯಯನದೊಂದಿಗೆ ನೈಮಿತ್ತಿಕ ಹಾಗೂ ವ್ಯಕ್ತಿತ್ವ ಬೆಳೆವಣಿಗೆಗೆ ಪೂರಕವಾದ ವಿಷಯಗಳನ್ನು ಶಿಕ್ಷಕರು ಕಲಿಸಿಕೊಡುವರು.

ಇತ್ತೀಚಿನ ಸುದ್ದಿ

ಜಾಹೀರಾತು