2:06 AM Thursday9 - July 2026
ಬ್ರೇಕಿಂಗ್ ನ್ಯೂಸ್
ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:…

ಇತ್ತೀಚಿನ ಸುದ್ದಿ

ಮಾಣಿ ಮಠದಲ್ಲಿ ವಸಂತ ವೇದ ಶಿಬಿರ ಉದ್ಘಾಟನೆ; ಶಿಸ್ತು,ಶ್ರದ್ಧೆ ಕಲಿಕೆಗೆ ಪೂರಕ: ಹಾರಕೆರೆ ನಾರಾಯಣ ಭಟ್

16/04/2025, 11:50

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ವಿದ್ಯಾರ್ಥಿಗಳು ಶಿಸ್ತು ರೂಢಿಸಿಕೊಂಡು ಶ್ರದ್ಧೆಯಿಂದ ಕಲಿಯಬೇಕು. ವೇದ ಶಿಬಿರದಲ್ಲಿ ಆಸಕ್ತಿಯಿಂದ ಭಾಗವಹಿಸಿ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಮಾಣಿ ಪೆರಾಜೆ ಶ್ರೀ ರಾಮಚಂದ್ರಾಪುರ ಮಠದ ಆಡಳಿತ ಸಮಿತಿ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್ ಹೇಳಿದರು.


ಅವರು ಪೆರಾಜೆ ಮಠದಲ್ಲಿ‌ ಏರ್ಪಡಿಸಲಾದ ವಸಂತ ವೇದ ಶಿಬಿರ 2025ರ‌ ಉದ್ಘಾಟನಾ ಸಮಾರಂಭದ‌ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೇ.ಮೂ.ಕಾಂಚನ ಕೃಷ್ಣ ಕುಮಾರ್ ಶಿಬಿರ ಉದ್ಘಾಟಿಸಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ನಮ್ಮ ಪೂರ್ವಜರು ಹಾಕಿಕೊಟ್ಟ ಸಂಸ್ಕಾರದಂತೆ ವೇದಗಳ ಅಧ್ಯಯನ ಮಾಡುವ ಮೂಲಕ ಜ್ಞಾನ ‌ಭಂಡಾರ ಹೆಚ್ಚಿಸಿಕೊಳಬೇಕು. ಕಲಿತ ವಿದ್ಯೆ ಭದ್ರಪಡಿಸಲು ಮತ್ತೆಮತ್ತೆ ಅಧ್ಯಯನ ಮಾಡುವುದು ಅಗತ್ಯ ಎಂದರು.
ಸಂಪನ್ಮೂಲ ವ್ಯಕ್ತಿ ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಲಯದ ಪ್ರಮುಖ ಗುರು ಉಂಡೆಮನೆ ವಿಶ್ವೇಶ್ವರ ಭಟ್ ಮುಖ್ಯ ‌ಅತಿಥಿಯಾಗಿ ಮಾತನಾಡಿದರು. ಮಕ್ಕಳ ಸಾಮರ್ಥ್ಯ ಸದ್ಬಳಕೆಯಾಗುವಂತೆ ಹೆತ್ತವರು ವ್ಯವಸ್ಥೆ ಮಾಡಬೇಕು. ಸೋಲನ್ನೂ ಸವಾಲಾಗಿ ಸ್ವೀಕರಿಸುವ ಧೈರ್ಯವನ್ನು ಮಕ್ಕಳಲ್ಲಿ ಬೆಳೆಸಬೇಕು.ಬುದ್ಧಿ ವಂತಿಕೆಯೊಂದಿಗೆ ಹೃದಯವಂತಿಕೆಯೂ ಮುಖ್ಯವೆಂದರು.
ಯೋಗಶಿಕ್ಷಕ ವೆಂಕಟರಮಣ ಹೆಗಡೆ ಮಾತನಾಡಿ ಯೋಗದ ಮಹತ್ವ ತಿಳಿಸಿದರು.
ಪ್ರಧಾನ ಅರ್ಚಕ ವೇಮೂ. ವಿಘ್ನೇಶ್ವರ ಭಟ್ ,ವೇಮೂ. ಮಿತ್ತೂರು ಸತ್ಯಶಂಕರ ಭಟ್, ಕಾರ್ಯದರ್ಶಿ ಶಿವ ಪ್ರಸಾದ ಉಪಸ್ಥಿತರಿದ್ದರು.
ನಾರಾಯಣ ಭಟ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.
ವೇಮೂ. ಭಾರ್ಗವ ನಾರಾಯಣ ನಿರೂಪಿಸಿದರು. ಸಂಸ್ಕೃತ ಅಧ್ಯಾಪಕ ಶ್ರೀಹರಿ ಭಟ್ ವಂದಿಸಿದರು. ಒಂದು‌ ತಿಂಗಳು 50 ವಿದ್ಯಾರ್ಥಿಗಳಗೆ ವೇದಾಧ್ಯಯನದೊಂದಿಗೆ ನೈಮಿತ್ತಿಕ ಹಾಗೂ ವ್ಯಕ್ತಿತ್ವ ಬೆಳೆವಣಿಗೆಗೆ ಪೂರಕವಾದ ವಿಷಯಗಳನ್ನು ಶಿಕ್ಷಕರು ಕಲಿಸಿಕೊಡುವರು.

ಇತ್ತೀಚಿನ ಸುದ್ದಿ

ಜಾಹೀರಾತು