2:39 PM Sunday14 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

Karnataka Lokayukta | ಪುತ್ತೂರು: ಏಪ್ರಿಲ್ 24ರಂದು ಲೋಕಾಯುಕ್ತ ಜನಸಂಪರ್ಕ ಸಭೆ

17/04/2025, 22:43

ಮಂಗಳೂರು(reporterkarnataka.com): ಪುತ್ತೂರು ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ಏಪ್ರಿಲ್ 24 ರಂದು ಬೆಳಿಗ್ಗೆ 11 ಗಂಟೆಯಿಂದ ನಡೆಯಲಿದೆ.
ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೆÇಲೀಸ್ ನಿರೀಕ್ಷಕರು ನಮೂದಿಸಿದ ದಿನದಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.
ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ. ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ.
ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು: ಪೊಲೀಸ್ ಅಧೀಕ್ಷಕರ ಕಛೇರಿ : 0824–2950997, 9364062517, ಪೊಲೀಸ್ ಉಪಾಧೀಕ್ಷಕರು-1 ಕಛೇರಿ: 0824-2453420, 9364062579, ಪೊಲೀಸ್ ಉಪಾಧೀಕ್ಷಕರು-2 ಕಛೇರಿ: 0824 – 2453420, 9364062580, ಪೊಲೀಸ್ ನಿರೀೀಕ್ಷಕರು-1 ಕಛೇರಿ: 0824 – 2427237, 9364062691, ಪೊಲೀಸ್ ನಿರೀೀಕ್ಷಕರು-3 ಕಛೇರಿ: 0824 – 2427237, 9364062693.
ಅರ್ಜಿದಾರರು ನಮೂನೆ I & II ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಚೇರಿಗೆ ಅಥವಾ ನೇರವಾಗಿ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಅವರಿಗೆ ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು