1:34 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

Mangaluru | ಬೋಳಾರ: ಮದುವೆಯ ಮುನ್ನ ದಿನ ವಧು ಪರಾರಿ; ಮೆಹಂದಿ ಹಾಕಿಸಿಕೊಳ್ಳುವುದಾಗಿ ತೆರಳಿದಾಕೆ ನಾಪತ್ತೆ

18/04/2025, 00:39

ಮಂಗಳೂರು(reporterkarnataka.com): ಮದುವೆ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳು ವಿವಾಹದ ಮುನ್ನಾ ದಿನ ನಾಪತ್ತೆಯಾದ ಘಟನೆ ನಗರದ ಬೋಳಾರದಲ್ಲಿ ನಡೆದಿದೆ.
ಬೋಳಾರದ ನಿವಾಸಿಯಾದ ಪಲ್ಲವಿ (22) ಎಂಬಾಕೆ ನಾಪತ್ತೆಯಾದ ಯುವತಿ. ಈಕೆಯ ಒಪ್ಪಿಗೆಯಂತೆ ಎ. 16ರಂದು ವಿವಾಹ ನಿಗದಿಯಾಗಿತ್ತು. ಎ. 15ರಂದು ಮಧ್ಯಾಹ್ನ ಆಕೆ ಮೆಹಂದಿ ಹಾಕಿಕೊಳ್ಳಲು ಬ್ಯೂಟಿ ಪಾರ್ಲರ್ ಗೆ ಹೋಗಿ ಬರುವುದಾಗಿ ತಾಯಿಯಲ್ಲಿ ತಿಳಿಸಿ ಬೋಳಾರದ ಮನೆಯಿಂದ ಒಬ್ಬಳೇ ಹೋದ್ದಳು. ಆದರೆ ಆಕೆ ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ. ಆಕೆಯ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ಈ ಕುರಿತು ಮಂಗಳೂರು ದಕ್ಷಿಣ ಠಾಣೆಯ ಪೊಲೀಸರಿಗೆ ದೂರು ನೀಡಲಾಗಿದೆ. 5 ಅಡಿ ಎತ್ತರ, ಬಿಳಿ ಮೈಬಣ್ಣ ಸಾಧಾರಣ ಶರೀರ, ಕಪ್ಪು ಉದ್ದ ಕೂದಲು ಹೊಂದಿದ್ದು ಕನ್ನಡ, ತುಳು, ಇಂಗ್ಲಿಷ್ ಮತ್ತು ಹಿಂದಿ ಮಾತನಾಡುತ್ತಾಳೆ. ಬ್ಲೂ ಜೀನ್ಸ್ ಪ್ಯಾಂಟ್ ಮತ್ತು ಬ್ಲ್ಯಾಕ್ ಟೀ ಶರ್ಟ್ ಧರಿಸಿದ್ದಳು.

ಇತ್ತೀಚಿನ ಸುದ್ದಿ

ಜಾಹೀರಾತು