7:23 AM Thursday23 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

Mangaluru | ಬೋಳಾರ: ಮದುವೆಯ ಮುನ್ನ ದಿನ ವಧು ಪರಾರಿ; ಮೆಹಂದಿ ಹಾಕಿಸಿಕೊಳ್ಳುವುದಾಗಿ ತೆರಳಿದಾಕೆ ನಾಪತ್ತೆ

18/04/2025, 00:39

ಮಂಗಳೂರು(reporterkarnataka.com): ಮದುವೆ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳು ವಿವಾಹದ ಮುನ್ನಾ ದಿನ ನಾಪತ್ತೆಯಾದ ಘಟನೆ ನಗರದ ಬೋಳಾರದಲ್ಲಿ ನಡೆದಿದೆ.
ಬೋಳಾರದ ನಿವಾಸಿಯಾದ ಪಲ್ಲವಿ (22) ಎಂಬಾಕೆ ನಾಪತ್ತೆಯಾದ ಯುವತಿ. ಈಕೆಯ ಒಪ್ಪಿಗೆಯಂತೆ ಎ. 16ರಂದು ವಿವಾಹ ನಿಗದಿಯಾಗಿತ್ತು. ಎ. 15ರಂದು ಮಧ್ಯಾಹ್ನ ಆಕೆ ಮೆಹಂದಿ ಹಾಕಿಕೊಳ್ಳಲು ಬ್ಯೂಟಿ ಪಾರ್ಲರ್ ಗೆ ಹೋಗಿ ಬರುವುದಾಗಿ ತಾಯಿಯಲ್ಲಿ ತಿಳಿಸಿ ಬೋಳಾರದ ಮನೆಯಿಂದ ಒಬ್ಬಳೇ ಹೋದ್ದಳು. ಆದರೆ ಆಕೆ ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ. ಆಕೆಯ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ಈ ಕುರಿತು ಮಂಗಳೂರು ದಕ್ಷಿಣ ಠಾಣೆಯ ಪೊಲೀಸರಿಗೆ ದೂರು ನೀಡಲಾಗಿದೆ. 5 ಅಡಿ ಎತ್ತರ, ಬಿಳಿ ಮೈಬಣ್ಣ ಸಾಧಾರಣ ಶರೀರ, ಕಪ್ಪು ಉದ್ದ ಕೂದಲು ಹೊಂದಿದ್ದು ಕನ್ನಡ, ತುಳು, ಇಂಗ್ಲಿಷ್ ಮತ್ತು ಹಿಂದಿ ಮಾತನಾಡುತ್ತಾಳೆ. ಬ್ಲೂ ಜೀನ್ಸ್ ಪ್ಯಾಂಟ್ ಮತ್ತು ಬ್ಲ್ಯಾಕ್ ಟೀ ಶರ್ಟ್ ಧರಿಸಿದ್ದಳು.

ಇತ್ತೀಚಿನ ಸುದ್ದಿ

ಜಾಹೀರಾತು