10:35 AM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

Ullala | ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಆಟೋ ಚಾಲಕ ಸಹಿತ 3 ಮಂದಿ ಬಂಧನ

18/04/2025, 00:53

ಮಂಗಳೂರು(reporterkarnataka.com):
ನಗರದ ಹೊರವಲಯದ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಕುತ್ತಾರು ಸಮೀಪದ ಬಂಗ್ಲೆ ಕೊಟ್ಟಾರಿಮೂಲೆ ಎಂಬಲ್ಲಿ ಯುವತಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.
ಬಂಧಿತರನ್ನು ಆಟೋ ಚಾಲಕ ಪ್ರಭುರಾಜ್ (38), ಕುಂಪಲ ನಿವಾಸಿ ಮಿಥುನ್ (30) ಹಾಗೂ ಮಂಗಳೂರಿನಲ್ಲಿ ವಾಸ ಮಾಡುವ ಮಣಿ ಎಂದು ಗುರುತಿಸಲಾಗಿದೆ.
ಉತ್ತರ ಭಾರತ ಮೂಲದ ಯುವತಿಯನ್ನು ಕೊಟ್ಟಾರಿಮೂಲೆಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಬಂಧಿತ ಆರೋಪಿಗಳಲ್ಲಿ
ಪ್ರಭುರಾಜ್ ಎಂಬಾತ ಮುಲ್ಕಿ ನಿವಾಸಿಯಾಗಿದ್ದು, 10 ವರ್ಷಕ್ಕಿಂತ ಹೆಚ್ಚು ಕಾಲ ಆಟೋ ಚಾಲಕನಾಗಿ ದುಡಿಯುತ್ತಿದ್ದಾನೆ. ಮಿಥುನ್ಎಂಬಾತ ಕುಂಪಲ ನಿವಾಸಿಯಾಗಿದ್ದು ಇಲೆಕ್ಟಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದಾನೆ. ಮಣಿ ಮಂಗಳೂರಿನಲ್ಲಿ ವಾಸ ಮಾಡುತ್ತಿದ್ದಾನೆ.
ಗೆಳೆಯನ ಜೊತೆಗೆ ಮುನಿಸಿಕೊಂಡು ಬಂದ ಉತ್ತರ ಪ್ರದೇಶ ಮೂಲದ ಈ ಯುವತಿಗೆ ಮದ್ಯಪಾನ ಮಾಡಿಸಿ ಅತ್ಯಾಚಾರ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಮುನ್ನೂರು ಗ್ರಾಮದ ರಾಜೇಶ್ ಎಂಬವರ ಮನೆಯ ಬಾಗಿಲು ಬಡಿದ ಸದ್ದು ಕೇಳಿಸಿ ಮನೆಯವರು ಹೊರಗೆ ಬಂದು ನೋಡಿದಾಗ ಯುವತಿಯೊಬ್ಬಳು ನಶೆಯಲ್ಲಿದ್ದು, ಕಣ್ಣೀರು ಹಾಕುತ್ತಲೇ ಮನೆಯವರ ಬಳಿ ನೀರು ಕೇಳಿದ್ದಾಳೆ. ನೀರು ಕೇಳಿದ ತಕ್ಷಣ ಆಕೆ ಪ್ರಜ್ಞೆ ತಪ್ಪಿದ್ದು, ಸೇರಿದ ಗ್ರಾಮಸ್ಥರು ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ಬಂದು ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು