5:10 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Chikkamagaluru | ಚಾರ್ಮಾಡಿ ಘಾಟಿಯಲ್ಲಿ ಹೆಚ್ಚುತ್ತಿರುವ ಒಂಟಿ ಸಲಗದ ಕಾಟ: ಕಾರು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

18/04/2025, 10:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗದ ಕಾಟ ಮಿತಿ ಮೀರಿದ್ದು, ಕಾರು ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.


ಚಾರ್ಮಾಡಿ ಘಾಟಿಯಲ್ಲಿ ಆನೆ ಕಂಡರೂ ಕಾರು ಚಾಲಕ ಆನೆಯ ಪಕ್ಕದಲ್ಲೇ ಡ್ರೈವ್ ಮಾಡಿಕೊಂಡು ಹೋಗಿದ್ದಾರೆ. ಅದೃಷ್ಟವತಾಶ್, ಆನೆ ಒಂದು ಹೆಜ್ಜೆ ಹಿಂದೆ ಸರಿದಿದೆ. ಎಲ್ಲದರೂ ಒಂಟಿ ಸಲಗ ಸೊಂಡಿಲಿನಲ್ಲಿ ಒಂದು ಏಟು ಕೊಡುತ್ತಿದ್ದರೂ ಕಾರು ನಿಂತು ಹೋಗುತ್ತಿತ್ತು. ಅದೃಷ್ಟವಶಾತ್ ಕಾರಿನಲ್ಲಿದ್ದವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಕಳೆದ ರಾತ್ರಿ ಸರ್ಕಾರಿ ಬಸ್ಸಿಗೆ ಒಂಟಿ ಸಲಗ ಅಡ್ಡ ನಿಂತಿತ್ತು. ನಿನ್ನೆ ಸಂಜೆ ಕೂಡ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಸುಮಾರು ಅರ್ಧ ಗಂಟೆಗಳ ಕಾಲ ಒಂಟಿ ಸಲಗ ನಿಂತಲ್ಲೇ ನಿಂತಿತ್ತು. ಘಾಟಿಯಲ್ಲಿ ಕಿ.ಮೀ. ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು.ಚಾರ್ಮಾಡಿ ಘಾಟ್ ಒಂದೆಡೆ ಗುಡ್ಡ, ಮತ್ತೊಂದೆಡೆ ಪ್ರಪಾತ ಆನೆ ದಾಳಿಗೆ ಮುಂದಾದ್ರೆ ತಪ್ಪಿಸಿಕೊಳ್ಳೋದು ಬಹಳ ಕಷ್ಟ.

ಇತ್ತೀಚಿನ ಸುದ್ದಿ

ಜಾಹೀರಾತು