12:45 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

Good Friday | ಕರಾವಳಿ ಕರ್ನಾಟಕದಲ್ಲಿ ಭಕ್ತಿಭಾವದೊಂದಿಗೆ ಗುಡ್ ಪ್ರೈಡೇ ಆಚರಣೆ: ಉಪವಾಸ, ಧ್ಯಾನ, ಸಾಮೂಹಿಕ ಪ್ರಾರ್ಥನೆ

18/04/2025, 14:39

ಮಂಗಳೂರು(reporterkarnataka.com): ಕ್ರೈಸ್ತರು ಪವಿತ್ರ ದಿನವಾದ ಶುಭ ಶುಕ್ರವಾರ(ಗುಡ್ ಪ್ರೈಡೇ) ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು.
ಕರಾವಳಿಯ ಜಿಲ್ಲೆಗಳ ಎಲ್ಲ ಚರ್ಚ್ ಗಳಲ್ಲೂ ಬೆಳಗ್ಗಿನಿಂದ ಪ್ರಾರ್ಥನೆ, ಧ್ಯಾನ, ಯೇಸುವಿನ ಶಿಲುಬೆಯ ಹಾದಿಯ ವಾಚನ ನಡೆಯಿತು. ಎಲ್ಲ ಕಾರ್ಯಕ್ರಮಗಳಲ್ಲಿ ಕ್ರೈಸ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಮಂಗಳೂರಿನ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ ಶುಭ ಶುಕ್ರವಾರದ ವಿಧಿವಿಧಾನಗಳನ್ನು ಕಾಸರಗೋಡಿನ ಬೋವಿಕ್ಕಾನದಲ್ಲಿ ನಡೆಸಿಕೊಟ್ಟರು.
ಶಿಲುಬೆಯ ಹಾದಿ:ಕೆಲವು ಚರ್ಚ್ ಗಳಲ್ಲಿ ಯೇಸು ಕ್ರಿಸ್ತರ ಬಂಧನ, ಶಿಲುಬೆಯ ಮೇಲೆ ಮರಣವನ್ನಪ್ಪುವ ತನಕದ ಘಟನೆಗಳನ್ನು ಪ್ರಸ್ತುತ ಪಡಿಸಲಾಯಿತು. ಶಿಲುಬೆಯ ಹಾದಿಯ 14 ಪ್ರಮುಖ ಘಟ್ಟಗಳನ್ನು ನೆನಪಿಸಿ ಧ್ಯಾನಿಸಿ ಪ್ರಾರ್ಥಿಸಿದರು. ಸಂಜೆ ಚರ್ಚ್ ಗಳಲ್ಲಿ ನಡೆದ ಪ್ರಾರ್ಥನಾ ವಿಧಿಗಳಲ್ಲಿ ಬೈಬಲ್ ವಾಚನದ ವೇಳೆ ಧರ್ಮಗುರುಗಳು ರಕ್ತವರ್ಣದ ಪೂಜೆ ಬಟ್ಟೆಯನ್ನು ಧರಿಸಿ ಯೇಸು ಕ್ರಿಸ್ತರ ಕೊನೆಯ ಗಳಿಗೆಗಳ ಕಥನವನ್ನು ಓದಿದರು. ಬಳಿಕ ಪ್ರವಚನ ನೀಡಿದರು. ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ, ಶಿಲುಬೆಯ ಆರಾಧನೆ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು