3:45 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

Good Friday | ಕರಾವಳಿ ಕರ್ನಾಟಕದಲ್ಲಿ ಭಕ್ತಿಭಾವದೊಂದಿಗೆ ಗುಡ್ ಪ್ರೈಡೇ ಆಚರಣೆ: ಉಪವಾಸ, ಧ್ಯಾನ, ಸಾಮೂಹಿಕ ಪ್ರಾರ್ಥನೆ

18/04/2025, 14:39

ಮಂಗಳೂರು(reporterkarnataka.com): ಕ್ರೈಸ್ತರು ಪವಿತ್ರ ದಿನವಾದ ಶುಭ ಶುಕ್ರವಾರ(ಗುಡ್ ಪ್ರೈಡೇ) ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು.
ಕರಾವಳಿಯ ಜಿಲ್ಲೆಗಳ ಎಲ್ಲ ಚರ್ಚ್ ಗಳಲ್ಲೂ ಬೆಳಗ್ಗಿನಿಂದ ಪ್ರಾರ್ಥನೆ, ಧ್ಯಾನ, ಯೇಸುವಿನ ಶಿಲುಬೆಯ ಹಾದಿಯ ವಾಚನ ನಡೆಯಿತು. ಎಲ್ಲ ಕಾರ್ಯಕ್ರಮಗಳಲ್ಲಿ ಕ್ರೈಸ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಮಂಗಳೂರಿನ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ ಶುಭ ಶುಕ್ರವಾರದ ವಿಧಿವಿಧಾನಗಳನ್ನು ಕಾಸರಗೋಡಿನ ಬೋವಿಕ್ಕಾನದಲ್ಲಿ ನಡೆಸಿಕೊಟ್ಟರು.
ಶಿಲುಬೆಯ ಹಾದಿ:ಕೆಲವು ಚರ್ಚ್ ಗಳಲ್ಲಿ ಯೇಸು ಕ್ರಿಸ್ತರ ಬಂಧನ, ಶಿಲುಬೆಯ ಮೇಲೆ ಮರಣವನ್ನಪ್ಪುವ ತನಕದ ಘಟನೆಗಳನ್ನು ಪ್ರಸ್ತುತ ಪಡಿಸಲಾಯಿತು. ಶಿಲುಬೆಯ ಹಾದಿಯ 14 ಪ್ರಮುಖ ಘಟ್ಟಗಳನ್ನು ನೆನಪಿಸಿ ಧ್ಯಾನಿಸಿ ಪ್ರಾರ್ಥಿಸಿದರು. ಸಂಜೆ ಚರ್ಚ್ ಗಳಲ್ಲಿ ನಡೆದ ಪ್ರಾರ್ಥನಾ ವಿಧಿಗಳಲ್ಲಿ ಬೈಬಲ್ ವಾಚನದ ವೇಳೆ ಧರ್ಮಗುರುಗಳು ರಕ್ತವರ್ಣದ ಪೂಜೆ ಬಟ್ಟೆಯನ್ನು ಧರಿಸಿ ಯೇಸು ಕ್ರಿಸ್ತರ ಕೊನೆಯ ಗಳಿಗೆಗಳ ಕಥನವನ್ನು ಓದಿದರು. ಬಳಿಕ ಪ್ರವಚನ ನೀಡಿದರು. ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ, ಶಿಲುಬೆಯ ಆರಾಧನೆ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು