4:47 AM Wednesday20 - May 2026
ಬ್ರೇಕಿಂಗ್ ನ್ಯೂಸ್
ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಗ್ರೇಸ್ ಮಿನಿಸ್ಟ್ರಿ: ಮಂಗಳೂರು ಮತ್ತು ಬೆಂಗಳೂರಿನಲ್ಲಿ ಅದ್ದೂರಿ ಪಸ್ಕ ಹಬ್ಬ ಆಚರಣೆ, ಮಂಜೂಷ ಪೆಟ್ಟಿಗೆ ಸ್ಥಾಪನೆ

18/04/2025, 19:36

ಬೆಂಗಳೂರು/ ಮಂಗಳೂರು(reporterkarnataka.com): ಗ್ರೇಸ್ ಮಿನಿಸ್ಟ್ರಿ ಸಂಸ್ಥೆ ವತಿಯಿಂದ ಎರಡು ದಿನಗಳ ಪಸ್ಕ ಹಬ್ಬ ಹಾಗೂ ಒಡಂಬಡಿಕೆ ಮಂಜೂಷ ಪೆಟ್ಟಿಗೆಯ ಸ್ಥಾಪನೆ ಮಂಗಳೂರಿನ ಹೊರವಲಯದ ವಳಚ್ಚಿಲ್ ಮತ್ತು ಬೆಂಗಳೂರಿನ ಬೂದಿಗೆರೆಯಲ್ಲಿ ನಡೆಯಿತು.
ಪಸ್ಕ ಹಬ್ಬ ಸಂದರ್ಭದಲ್ಲಿ ಗುಡ್ ಫ್ರೈಡೇ ಸಡಗರದ ಜೊತೆಗೆ ದೇಶದಲ್ಲೇ ಪ್ರಪ್ರಥಮ ಬಾರಿಗೆ ಚರ್ಚ್ ಆವರಣದಲ್ಲಿ ಬೈಬಲ್ ಪ್ರೇರಿತ ಒಡಂಬಡಿಕೆ ಮಂಜೂಷ ಪೆಟ್ಟಿಗೆಯನ್ನು ಅದ್ದೂರಿಯಾಗಿ ಬರಮಾಡಿಕೊಂಡು 7 ಸುತ್ತುಗಳ ಮೆರವಣಿಗೆಯ ನಂತರ ಬೆಂಗಳೂರಿನಲ್ಲಿ ಅನಾವರಣಗೊಳಿಸಲಾಯಿತು.
ದೇಶ-ವಿದೇಶಗಳಿಂದ ಹಾಗೂ ರಾಜ್ಯದ ಹಲವಾರು ಜಿಲ್ಲೆಗಳಿಂದ ಸಾವಿರಾರು ಭಕ್ತರು ಪಸ್ಕ ಹಬ್ಬದಲ್ಲಿ ಪಾಲ್ಗೊಂಡಿದ್ದು, ಬಿಷಪ್ ಡಾ. ಆಂಡ್ರೋ ರಿಚರ್ಡ್ ಅವರು ಪಸ್ಕ ಹಾಗೂ ಮಂಜೂಷ ಪೆಟ್ಟಿಗೆಯ ಮಹತ್ವವನ್ನ ಭಕ್ತರಿಗೆ ಸಾರಿದರು.
ಇದೇ ವೇಳೆ ಗ್ರೇಸ್ ಮಿನಿಸ್ಟ್ರಿ ನಿರ್ದೇಶಕರು ಹಾಗೂ ಸಂಸ್ಥಾಪಕರಾದ ಡಾ.ಆಂಡ್ರ್ಯೂ ರಿಚರ್ಡ್ ಅವರು ಮಾತನಾಡಿ, ಈ ವರ್ಷ ಪಸ್ಕ ಹಬ್ಬದ ಜೊತೆಗೆ ದೇಶದಲ್ಲೇ ಪ್ರಪ್ರಥಮ ಬಾರಿಗೆ ಮಂಜೂಷ ಪೆಟ್ಟಿಗೆಯ ಸ್ಥಾಪನೆ ಮಾಡಿರುವ ಸಂಸ್ಥೆ ಎಂದು ಹೇಳುವುದಕ್ಕೆ ಸಂತೋಷಪಡುತ್ತೇನೆ ಎಂದರು.
ಹಬ್ಬದ ಪ್ರಯುಕ್ತ ಬಡ ಮಕ್ಕಳ ಉಚಿತ ಶಿಕ್ಷಣಕ್ಕಾಗಿ ನೆರವು ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಸಮುದಾಯದ ಮಕ್ಕಳನ್ನು ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಇನ್ನು 2024ರ ಪಸ್ಕ ಹಬ್ಬ ಆಚರಿಸಿದ ಸಂದರ್ಭ ಬಡ ಚರ್ಚ್ ಒಂದು ಹಣಕಾಸಿನ ತೊಂದರೆಯಿಂದಾಗಿ ಅರ್ಧದಲ್ಲಿ ನಿಂತು ಹೋಗಿತ್ತು, ಗ್ರೇಸ್ ಮಿನಿಸ್ಟ್ರಿ ಸಂಸ್ಥೆಯಿಂದ 8 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಆ ಚರ್ಚಿನ ಸಂಪೂರ್ಣ ನಿರ್ಮಾಣಕ್ಕೆ ಸಂಸ್ಥೆ ದಾರಿ ಮಾಡಿಕೊಟ್ಟಿದೆ ಎಂದರು.
ಪ್ರತಿ ವರ್ಷ ಪಸ್ಕ ಹಬ್ಬ ಆಯೋಜಿಸಲಾಗುತ್ತಿದ್ದು, ಆಮೂಲಕ ಬಡವರು, ಅನಾಥರು, ಬಡ ವಿದ್ಯಾರ್ಥಿಗಳಿಗೆ ಸಂಸ್ಥೆ ವತಿಯಿಂದ ನೆರವು ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ ಎಂದರು.


ಇನ್ನು ಒಡಂಬಡಿಕೆ ಮಂಜೂಷ ಪೆಟ್ಟಿಗೆ ಸ್ಥಾಪನೆಯ ನಂತರ ಸಾವಿರಾರು ಭಕ್ತಾದಿಗಳು ಸಾಲು ಸಾಲಿನಲ್ಲಿ ನಿಂತು ತಮ್ಮ ಪ್ರಾರ್ಥನ ಮನವಿಗಳನ್ನು ಸಲ್ಲಿಸಿ ದೇವರ ದರ್ಶನವನ್ನ ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು