6:23 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೋವಿಡ 19′ ರ ಸಂದರ್ಭದಲ್ಲಿ ‘ಮಾನಸಿಕ ಯೋಗಕ್ಷೇಮ’ ಆನ್ಲೈನ್ ಕಾರ್ಯಾಗಾರ  

22/05/2021, 15:19

ಮಂಗಳೂರು(reporterkarnataka news); ಕೆನರಾ ಕಾಲೇಜು, ಮಂಗಳೂರು ಇದರ ರಾಷ್ಟ್ರೀಯ ಸೇವಾ ಯೋಜನೆಯು   “ಕೋವಿಡ 19 ರ ಸಂದರ್ಭದಲ್ಲಿ ಮಾನಸಿಕ ಯೋಗಕ್ಷೇಮ” ಎಂಬ ಕಾರ್ಯಾಗಾರವನ್ನು ಆನ್ಲೈನ್  ಮೂಲಕ ಹಮ್ಮಿಕೊಂಡಿತ್ತು.

ಕಾರ್ಯಾಗಾರದ  ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ರಾ.ಸೇ.ಯೋ ಕೋವಿಡ್ ನೋಡಲ್ ಅಧಿಕಾರಿ  ಡಾ.  ಶೇಷಪ್ಪ ಅಮೀನ್ ಕೆ.ನೆರವೇರಿಸಿದರು. ಉದ್ಘಾಟನಾ ಮಾತುಗಳನ್ನಾಡಿದ ಡಾ.  ಶೇಷಪ್ಪ ಅಮೀನ್ ಇವರು ಜನರಲ್ಲಿ ಕೊರೋನಾ ದ ಬಗ್ಗೆ ಜಾಗೃತಿಯನ್ನು ಮೂಡಿಸಬೇಕು ಹಾಗೂ ಅಪನಂಬಿಕೆಗಳನ್ನು ವೈಜ್ಞಾನಿಕ ದೃಷ್ಟಿಕೋನದ ಕಡೆಗೆ ತೆಗೆದುಕೊಂಡು ಹೋಗಬೇಕು ಎಂಬ ಕಿವಿಮಾತುಗಳನ್ನು ಆಡಿದರು. ಇದರ ಜೊತೆಗೆ ನಮ್ಮ ಮನಸ್ಥಿತಿಯನ್ನು ಉತ್ತಮವಾಗಿ ಇರಿಸಿಕೊಳ್ಳಬೇಕು ಎಂಬ ತಿಳುವಳಿಕೆಯನ್ನು ನೀಡಿದರು. ಕೋವಿಡ್ ಸಂದರ್ಭದಲ್ಲಿ ಆನ್ಲೈನ್ ತರಗತಿಗಳು ಜೀವನದ ಕ್ರಮವಾಗಿದೆ. ಎನ್.ಎನ್.ಎಸ್ ಸ್ವಯಂಸೇವಕರು ಮಾನಸಿಕ ಆರೋಗ್ಯದ ವಿಚಾರವಾಗಿ ಹೆಚ್ಚೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಿ ಜನರಿಗೆ ತಲುಪಿಸಿದಾಗ , ಕಾರ್ಯಾಗಾರದ ಉದ್ದೇಶ ಸಫಲವಾಗುತ್ತದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿ ಕೊಂಡ ಕೆನರಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರೇಮಲತಾ ವಿ.  ಅವರು ವ್ಯಾಯಾಮ ಹಾಗೂ ಉತ್ತಮ ಆಹಾರ ಸೇವನೆಯನ್ನು ಮಾಡುವ ಮೂಲಕ ಮಾನಸಿಕ ಹಾಗು ದೈಹಿಕ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ನೋಡಿಕೊಳ್ಳುವಂತೆ ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಸಹ್ಯಾದ್ರಿ ಕಾಲೇಜಿನ ಆರೋಗ್ಯ ಮತ್ತು ಸಮಾಲೋಚನಾ ಕೇಂದ್ರದ ಸಲಹೆಗಾರ ಅಂಕಿತ್ ಎಸ್ ಕುಮಾರ್ ಅವರು ಈ ಕೋವಿಡ ಪರಿಸ್ಥಿತಿಯಲ್ಲಿ ನಮಗೆ ಬೇಕಾದಂತಹ ಮಾನಸಿಕ ಯೋಗಕ್ಷೇಮದ ಬಗ್ಗೆ ವಿಸ್ತಾರವಾಗಿ ಮಾಹಿತಿಯನ್ನು ನೀಡಿದರು. ಇವರು ಮನಸ್ಸನ್ನು ಶುದ್ಧವಾಗಿ ಹಾಗೂ ಸ್ಥಿರವಾಗಿ ಇರಿಸಿಕೊಳ್ಳುವಂತೆ ಸೂಚಿಸಿದರು. ನಾವು ಯಾವುದೇ ವಿಷಯದ ಬಗ್ಗೆ ಹೆಚ್ಚಾಗಿ ಚಿಂತಿಸದೆ ಜೀವಿಸಬೇಕು. ಮನಸ್ಸನ್ನು ಶಾಂತವಾಗಿ ಇರಿಸಿಕೊಳ್ಳಲು ಧ್ಯಾನ, ಪ್ರಾಣಾಯಾಮ, ವ್ಯಾಯಾಮ ಹಾಗೂ ನಮಗೆ ಇಷ್ಟವಾದಂತಹ ಕೆಲಸಗಳನ್ನು ಮಾಡುತ್ತಿರಬೇಕು. ಮುಂದೇನಾಗುತ್ತದೆ ಎಂಬುದನ್ನು ಚಿಂತಿಸದೆ ಆ ಕ್ಷಣದಲ್ಲಿ ಜೀವಿಸಬೇಕು. ಅತಿಯಾದರೆ ಅಮೃತವೂ ವಿಷ ಎನ್ನುವಂತೆ,ಅತಿಯಾದ ಚಿಂತೆಯೂ ನಮ್ಮ ಜೀವನದ ಖುಷಿಯನ್ನು ಕಿತ್ತುಕೊಳ್ಳುತ್ತದೆ.ನಮಗೆ ನಡೆಯುತ್ತಿರುವ ವಿಷಯ ದ ಬಗ್ಗೆ ಗಮನ, ಸ್ಪಷ್ಟತೆ ಹಾಗೂ ಏಕಾಗ್ರತೆ ಇರಬೇಕು ಎಂದು ನುಡಿದರು.  ಸರಿಯಾದ ಉಸಿರಾಟ ಮಾಡುವ ವಿಧಾನವನ್ನು ಪ್ರಾತ್ಯಕ್ಶಿಕೆಯ ಮೂಲಕ ತಿಳಿಸಿಕೊಟ್ಟರು.


ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ, ಕಾರ್ಯಾಗಾರದ ಆಯೋಜಕರಾದ ಸೀಮಾ ಪ್ರಭು ಎಸ್. ಅವರು ಪ್ರಾಸ್ಥಾವಿಕ ಮಾತುಗಳನ್ನಾಡಿ ಸರ್ವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು.ಇನ್ನೊರ್ವ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಾವ್ಯಶ್ರೀ  ಧನ್ಯವಾದ ಸಮರ್ಪಿಸಿದರು. ಸ್ವಯಂಸೇವಕಿ ಸೌಮ್ಯ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು