10:54 PM Thursday29 - January 2026
ಬ್ರೇಕಿಂಗ್ ನ್ಯೂಸ್
ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:…

ಇತ್ತೀಚಿನ ಸುದ್ದಿ

ಮಂಗಳೂರು ಬಿಷಪ್ ಅ। ವಂ। ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಅವರಿಂದ ಈಸ್ಟರ್ ಹಬ್ಬದ ಶುಭ ಸಂದೇಶ

19/04/2025, 19:17

ಈಸ್ಟರ್ ಹಬ್ಬದ ಈ ಪವಿತ್ರ ಸಂದರ್ಭದಲ್ಲಿ, ಯೇಸು ಕ್ರಿಸ್ತರು ಮರಣವನ್ನು ಜಯಿಸಿ ಪುನರುತ್ಥಾನರಾದ ಸಂತೋಷವನ್ನು ನಾವು ಆಚರಿಸುತ್ತೇವೆ. ಶಿಲುಬೆಯ ಮೇಲೆ ಅವರ ತ್ಯಾಗ ಮತ್ತು ಪುನರುತ್ಥಾನವು ನಮಗೆ ಆಶಾಕಿರಣವನ್ನು, ಕ್ಷಮೆಯನ್ನು ಮತ್ತು ದೇವರ ಶಾಶ್ವತ ಪ್ರೀತಿಯನ್ನು ತೋರಿಸುತ್ತದೆ. ಕ್ರಿಸ್ತರು ಮ್ರತ್ಯುಂಜಯರಾದ ಆಚರಣೆಯ ಈ ಪವಿತ್ರ ಈಸ್ಟರ್ ಹಬ್ಬದ ನಿಮಿತ್ತ ನಿಮ್ಮೆಲ್ಲರಿಗೂ ಹಾರ್ದಿಕ ಶುಭಾಶಯಗಳು.
ಈಸ್ಟರ್ ಎಂದರೆ ವಿಜಯದ ಹಬ್ಬ – ಕೇಡಿನ ಮೇಲೆ ಸದ್ಗುಣಗಳ ಜಯ, ಅಸತ್ಯದ ಮೇಲೆ ಸತ್ಯದ ಜಯ, ಅಂಧಕಾರದ ಮೇಲೆ ಬೆಳಕಿನ ಜಯ, ಮರಣದ ಮೇಲೆ ಜೀವದ ಜಯ. ಯೇಸು ಕ್ರಿಸ್ತರು ತಮ್ಮ ಮರಣ ಮತ್ತು ಪುನರುತ್ಥಾನದ ಮೂಲಕ ನಮಗೆ ನವಜೀವನದ ದಾರಿ ತೋರಿಸಿದ್ದಾರೆ. ಅವರ ವಿಜಯದಲ್ಲಿ ನಾವು ಪಾಲುಗಾರರಾಗುವ ಮೂಲಕ, ನಮ್ಮ ಜೀವನದಲ್ಲಿ ಸತ್ಯ ಹಾಗು ಬೆಳಕಿನಲ್ಲಿ ನಡೆದು ಹೊಸ ಜೀವ ಪಡೆಯಬಹುದು.

ಈ ಈಸ್ಟರ್ ಸಮಯದಲ್ಲಿ ನಾವು ಸಹಾನುಭೂತಿ, ಕ್ಷಮೆ ಮತ್ತು ಪ್ರೀತಿಯ ಮೂಲಕ ಸಮಾಜದಲ್ಲಿ ಶಾಂತಿ ಮತ್ತು ಭರವಸೆ ಉಂಟುಮಾಡುವ ಸಂಕಲ್ಪವನ್ನು ಮಾಡೋಣ. ಕ್ರಿಸ್ತರು ತೋರಿಸಿದ ಮಾರ್ಗ ನಮ್ಮನ್ನು ನಡೆಸಲಿ. ನಾವು ಎಲ್ಲರಿಗೂ ದೇವರ ಪ್ರೀತಿಯ ಪ್ರತಿಬಿಂಬಗಳಾಗಿರೋಣ. ಒಗ್ಗಟ್ಟಿನಿಂದ, ದೇವರ ಕೃಪೆಯಲ್ಲಿ ನಾವು ಬೆಳೆಯುವ ಹಾಗು ನಮ್ಮ ಸುತ್ತಲಿನವರಿಗೆ ಶಾಂತಿ ಮತ್ತು ಸದ್ಭಾವನೆಯ ಸಂದೇಶವನ್ನು ಹಂಚಿಕೊಳ್ಳುವ.

ಇಂದು ಮತ್ತು ಸದಾ, ಕ್ರಿಸ್ತರ ಪುನರುತ್ಥಾನದ ಸಂತೋಷ ನಿಮ್ಮ ಕುಟುಂಬಗಳಿಗೆ ಆಶೀರ್ವಾದ ತರಲಿ ಎಂದು ಪ್ರಾರ್ಥಿಸುತ್ತೇನೆ.

ಅ। ವಂ। ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ, ಧರ್ಮಾಧ್ಯಕ್ಷರು, ಮಂಗಳೂರು

ಇತ್ತೀಚಿನ ಸುದ್ದಿ

ಜಾಹೀರಾತು