1:30 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು ಬಿಷಪ್ ಅ। ವಂ। ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಅವರಿಂದ ಈಸ್ಟರ್ ಹಬ್ಬದ ಶುಭ ಸಂದೇಶ

19/04/2025, 19:17

ಈಸ್ಟರ್ ಹಬ್ಬದ ಈ ಪವಿತ್ರ ಸಂದರ್ಭದಲ್ಲಿ, ಯೇಸು ಕ್ರಿಸ್ತರು ಮರಣವನ್ನು ಜಯಿಸಿ ಪುನರುತ್ಥಾನರಾದ ಸಂತೋಷವನ್ನು ನಾವು ಆಚರಿಸುತ್ತೇವೆ. ಶಿಲುಬೆಯ ಮೇಲೆ ಅವರ ತ್ಯಾಗ ಮತ್ತು ಪುನರುತ್ಥಾನವು ನಮಗೆ ಆಶಾಕಿರಣವನ್ನು, ಕ್ಷಮೆಯನ್ನು ಮತ್ತು ದೇವರ ಶಾಶ್ವತ ಪ್ರೀತಿಯನ್ನು ತೋರಿಸುತ್ತದೆ. ಕ್ರಿಸ್ತರು ಮ್ರತ್ಯುಂಜಯರಾದ ಆಚರಣೆಯ ಈ ಪವಿತ್ರ ಈಸ್ಟರ್ ಹಬ್ಬದ ನಿಮಿತ್ತ ನಿಮ್ಮೆಲ್ಲರಿಗೂ ಹಾರ್ದಿಕ ಶುಭಾಶಯಗಳು.
ಈಸ್ಟರ್ ಎಂದರೆ ವಿಜಯದ ಹಬ್ಬ – ಕೇಡಿನ ಮೇಲೆ ಸದ್ಗುಣಗಳ ಜಯ, ಅಸತ್ಯದ ಮೇಲೆ ಸತ್ಯದ ಜಯ, ಅಂಧಕಾರದ ಮೇಲೆ ಬೆಳಕಿನ ಜಯ, ಮರಣದ ಮೇಲೆ ಜೀವದ ಜಯ. ಯೇಸು ಕ್ರಿಸ್ತರು ತಮ್ಮ ಮರಣ ಮತ್ತು ಪುನರುತ್ಥಾನದ ಮೂಲಕ ನಮಗೆ ನವಜೀವನದ ದಾರಿ ತೋರಿಸಿದ್ದಾರೆ. ಅವರ ವಿಜಯದಲ್ಲಿ ನಾವು ಪಾಲುಗಾರರಾಗುವ ಮೂಲಕ, ನಮ್ಮ ಜೀವನದಲ್ಲಿ ಸತ್ಯ ಹಾಗು ಬೆಳಕಿನಲ್ಲಿ ನಡೆದು ಹೊಸ ಜೀವ ಪಡೆಯಬಹುದು.

ಈ ಈಸ್ಟರ್ ಸಮಯದಲ್ಲಿ ನಾವು ಸಹಾನುಭೂತಿ, ಕ್ಷಮೆ ಮತ್ತು ಪ್ರೀತಿಯ ಮೂಲಕ ಸಮಾಜದಲ್ಲಿ ಶಾಂತಿ ಮತ್ತು ಭರವಸೆ ಉಂಟುಮಾಡುವ ಸಂಕಲ್ಪವನ್ನು ಮಾಡೋಣ. ಕ್ರಿಸ್ತರು ತೋರಿಸಿದ ಮಾರ್ಗ ನಮ್ಮನ್ನು ನಡೆಸಲಿ. ನಾವು ಎಲ್ಲರಿಗೂ ದೇವರ ಪ್ರೀತಿಯ ಪ್ರತಿಬಿಂಬಗಳಾಗಿರೋಣ. ಒಗ್ಗಟ್ಟಿನಿಂದ, ದೇವರ ಕೃಪೆಯಲ್ಲಿ ನಾವು ಬೆಳೆಯುವ ಹಾಗು ನಮ್ಮ ಸುತ್ತಲಿನವರಿಗೆ ಶಾಂತಿ ಮತ್ತು ಸದ್ಭಾವನೆಯ ಸಂದೇಶವನ್ನು ಹಂಚಿಕೊಳ್ಳುವ.

ಇಂದು ಮತ್ತು ಸದಾ, ಕ್ರಿಸ್ತರ ಪುನರುತ್ಥಾನದ ಸಂತೋಷ ನಿಮ್ಮ ಕುಟುಂಬಗಳಿಗೆ ಆಶೀರ್ವಾದ ತರಲಿ ಎಂದು ಪ್ರಾರ್ಥಿಸುತ್ತೇನೆ.

ಅ। ವಂ। ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ, ಧರ್ಮಾಧ್ಯಕ್ಷರು, ಮಂಗಳೂರು

ಇತ್ತೀಚಿನ ಸುದ್ದಿ

ಜಾಹೀರಾತು