6:05 AM Friday10 - April 2026
ಬ್ರೇಕಿಂಗ್ ನ್ಯೂಸ್
ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ?

ಇತ್ತೀಚಿನ ಸುದ್ದಿ

Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ ಕರೆ

19/04/2025, 19:19

ಗೋಕರ್ಣ(reporterkarnataka.com): ಬೀದರ್ ನಲ್ಲಿ ಜನಿವಾರದ ಕಾರಣಕ್ಕಾಗಿ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡದ ಘಟನೆ ಮತ್ತು ಶಿವಮೊಗ್ಗದಲ್ಲಿ ಜನಿವಾರ ತುಂಡರಿಸಿದ ಘಟನೆ ತೀರಾ ವಿಷಾದನೀಯ. ಈ ದುರ್ವರ್ತನೆಯನ್ನು ಸಮಸ್ತ ಸಮಾಜ ಪ್ರತಿಭಟಿಸಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಕರೆ ನೀಡಿದ್ದಾರೆ.
ಅಧಿಕಾರಿಗಳ ಈ ವರ್ತನೆಯ ಹಿಂದು ದ್ವೇಷ, ಜಾತಿದ್ವೇಷ, ಒಂದು ಜಾತಿಯನ್ನು ಸಂಪೂರ್ಣ ತುಳಿದು ಬಿಡಬೇಕು ಎನ್ನುವ ಭಾವ ಕಾಣಿಸುತ್ತಿದೆ. ಪರೀಕ್ಷೆಗಳು ಮಕ್ಕಳ ಹಣೆಬರಹವನ್ನು ನಿರ್ಧರಿಸುವಂಥದ್ದು; ವಿದ್ಯಾರ್ಥಿಗಳು ಪರೀಕ್ಷೆಯ ಮಾನಸಿಕ ಒತ್ತಡದಲ್ಲಿರುವಾಗ ಅಧಿಕಾರಿಗಳು ಕ್ರೌರ್ಯ ಮೆರೆದಿರುವುದು ದಬ್ಬಾಳಿಕೆ ನಡೆಸಿರುವುದು ಖಂಡನೀಯ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಜನಿವಾರ ಕೀಳುವಾಗ ಮನಸ್ಸಿಗೆ ಎಂಥ ನೋವಾಗುತ್ತದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಬ್ರಾಹ್ಮಣರು ಇದನ್ನು ಸಹಿಸಬಾರದು; ಇದನ್ನು ಇಲ್ಲಿಗೇ ಬಿಟ್ಟರೆ ದೇಶದಲ್ಲಿ ಬದುಕಲೂ ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಎಚ್ಚರಿಸಿದ್ದಾರೆ.
ಈ ಕೃತ್ಯವನ್ನು ಬ್ರಾಹ್ಮಣರು ಸಂಘಟಿತರಾಗಿ ಪ್ರತಿಭಟಸುವುದು ಅಗತ್ಯ ಮಾತ್ರವಲ್ಲ; ಅನಿವಾರ್ಯವೂ ಹೌದು. ಇದು ಬ್ರಾಹ್ಮಣರಿಗಷ್ಟೇ ಸೀಮಿತವಲ್ಲ; ಬೇರೆಯವರೂ ಜನಿವಾರವನ್ನು ಗೌರವದಿಂದ ಧಾರಣೆ ಮಾಡುತ್ತಾರೆ. ಲಿಂಗಾಯಿತರು ಕೂಡಾ ಲಿಂಗವನ್ನು ಧರಿಸುತ್ತಾರೆ. ಅದನ್ನೂ ಇಂಥದ್ದೇ ಸೂತ್ರದಿಂದ ಧರಿಸಲಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಇಡೀ ಸಮಾಜಕ್ಕೆ ಅಪಾಯ ಕಾದಿದೆ ಎಂದು ಹೇಳಿದ್ದಾರೆ.
ಧಾರ್ಮಿಕ ಚಿಹ್ನೆಯನ್ನು ತೆಗೆದುಹಾಕಿದರೆ ಪರೀಕ್ಷೆ ಬರೆಯುವುದಿಲ್ಲ ಎಂದು ದೃಢ ನಿರ್ಧಾರ ಕೈಗೊಂಡ ವಿದ್ಯಾರ್ಥಿಗೆ ಅಭಿನಂದನೆ ಸಲ್ಲಿಸುತ್ತೇವೆ. ಧಾರ್ಮಿಕತೆಯಲ್ಲಿ ರಾಜಿ ಮಾಡಿಕೊಳ್ಳದ ವಿದ್ಯಾರ್ಥಿಯನ್ನು ಮೆಚ್ಚಬೇಕು. ಜನಿವಾರದ ಕಾರಣಕ್ಕೆ ಪರೀಕ್ಷೆ ಬರೆಯಲು ಸಾಧ್ಯವಾಗದ ಎಲ್ಲರಿಗೂ ಸಹಾಯಹಸ್ತ ಚಾಚಲು ಶ್ರೀಮಠ ಸಿದ್ಧ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇಡೀ ಬ್ರಾಹ್ಮಣ ಸಮಾಜ ಮಾತ್ರವಲ್ಲ; ಭಾರತೀಯರೆಲ್ಲರೂ ಒಗ್ಗೂಡಿ ತಕ್ಕ ಪ್ರತಿಕ್ರಿಯೆ ನೀಡಬೇಕು ಎಂದು ಅವರು ಆಶಿಸಿದ್ದಾರೆ.
ಹವ್ಯಕ ಮಹಾಮಂಡಲ ಕೂಡಾ ಘಟನೆಯನ್ನು ಖಂಡಿಸಿದ್ದು, ಸಮಗ್ರ ಹವ್ಯಕ ಮಹಾಮಂಡಲ ಸಭೆಯಲ್ಲಿ ಈ ಬಗ್ಗೆ ಖಂಡನಾ ನಿರ್ಣಯ ಆಂಗೀಕರಿಸಿದೆ. ಅಕ್ಷಮ್ಯ ಅಪರಾಧ ಎಸಗಿದ ಅಧಿಕಾರಿಗಳಿಗೆ ಶಿಕ್ಷೆ ವಿಧಿಸಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕು. ಜನಿವಾರ ಕಾರಣಕ್ಕೆ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿ, ವಿದ್ಯಾರ್ಥಿಯ ಭವಿಷ್ಯ ಹಾಗೂ ಆತ್ಮಗೌರವ ರಕ್ಷಿಸಬೇಕು ಎಂದು ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು