5:21 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

Kuppepadavu | ಹಕ್ಕುಪತ್ರ ಪಡೆದವರಿಗೆ ನಿವೇಶನ ನೀಡದೆ ವಂಚನೆ: ಗುರುಪುರ ನಾಡ ಕಚೇರಿ ಮುಂಭಾಗ ಸಂತ್ರಸ್ತರ ಪ್ರತಿಭಟನೆ

19/04/2025, 21:06

ಮಂಗಳೂರು(reporterkarnataka.com): ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಕ್ಕು
ಪತ್ರ ಪಡೆದ 97 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ 7 ವರ್ಷಗಳು ಕಳೆದರೂ ನಿವೇಶನ ಸ್ವಾಧೀನ ನೀಡದೆ ವಂಚಿಸುತ್ತಿರುವುದನ್ನು ಖಂಡಿಸಿ ಸಂತ್ರಸ್ತರು ಗುರುಪುರ ನಾಡ ಕಚೇರಿ ಮುಂಭಾಗ “ನಿವೇಶನ ರಹಿತರ ಹೋರಾಟ ಸಮಿತಿ, ಕುಪ್ಪೆಪದವು” ಇದರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
2018ರಲ್ಲಿ ಶಾಸಕ ಡಾ. ಭರತ್ ಶೆಟ್ಡಿ ನೇತೃತ್ವದಲ್ಲಿ ತರಾತುರಿಯುಲ್ಲಿ 97 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿ ನಿವೇಶನಗಳನ್ನು ಗುರುತು ಮಾಡಲಾಗಿತ್ತು. ಆ ತರುವಾಯ ನಿವೇಶನ ಸ್ವಾಧೀನ ನೀಡದೆ ಬಡ ನಿವೇಶನ ರಹಿತರನ್ನು ಸತಾಯಿಸಲಾಗುತ್ತಿತ್ತು. ಕಳೆದ ಜನವರಿಯಲ್ಲಿ ಸಂತ್ರಸ್ತರು ಹೋರಾಟ ಸಮಿತಿ ರಚಿಸಿಕೊಂಡು ಜಮೀನು ಸ್ವಾಧೀನ ನೀಡುವಂತೆ ಹೋರಾಟ ಆರಂಭಿಸಿದ್ದರು. ಈ ಕುರಿತು ಜನವರಿಯಲ್ಲಿ ಕುಪ್ಪೆಪದವು ಪಂಚಾಯತ್ ಮುಂಭಾಗ ನಡೆದ ಧರಣಿಯಲ್ಲಿ ಮನವಿ ಸ್ವೀಕರಿಸಲು ಆಗಮಿಸಿದ ಡೆಪ್ಯುಟಿ ತಹಶೀಲ್ದಾರ್, ಫೆಬ್ರವರಿ ಕೊನೆಯಲ್ಲಿ ನಿವೇಶನ ಸ್ವಾಧೀನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ತಾಲೂಕು ಆಡಳಿತ ಮಾತು ತಪ್ಪಿದ್ದರಿಂದ ಇಂದು ಗುರುಪುರ ನಾಡ ಕಚೇರಿ ಮುಂಭಾಗ ಪ್ರತಿಭಟನಾ ಪ್ರದರ್ಶನ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಉಪ ತಹಶೀಲ್ದಾರ್ “ನಿವೇಶನ ಸ್ವಾಧೀನ ನೀಡಲು ತಾಂತ್ರಿಕ ಸಮಸ್ಯೆಗಳು ಇವೆ” ಎಂದು ಹೇಳಿದ್ದು ಸಂತ್ರಸ್ತರನ್ನು ಸಿಟ್ಟಿಗೆಬ್ಬಿಸಿತು. ಈ ಕುರಿತು ಸ್ಥಳದಲ್ಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಗ್ರಾಮಪಂಚಾಯತ್ ಮುಂಭಾಗ ಅನಿರ್ಧಿಷ್ಟಾವಧಿ ಧರಣಿ ನಡೆಸುವ, ಗುರುತಿಸಿರುವ ಜಮೀನನ್ನು ನೇರ ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆಯುವ ಎಚ್ಚರಿಕೆ ನೀಡಿದರು. ಬಡ ನಿವೇಶನ ರಹಿತರನ್ನು ಕಡೆಗಣಿಸಿರುವ ಶಾಸಕ ಡಾ. ಭರತ್ ಶೆಟ್ಟಿ, ಈ ಕುರಿತು ಧ್ವನಿ ಎತ್ತದ ಕಾಂಗ್ರೆಸ್ ಮುಖಂಡ ಇನಾಯತ್ ಅಲಿಯ ನಡೆಯ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.


ಪ್ರತಿಭಟನಾ ಪ್ರದರ್ಶನವನ್ನು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಉದ್ಘಾಟಿಸಿದರು. ಕಾರ್ಮಿಕ ಮುಂದಾಳುಗಳಾದ ಸದಾಶಿವ ದಾಸ್, ನೋಣಯ್ಯ ಗೌಡ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನಿವೇಶನ ರಹಿತರ ಹೋರಾಟ ಸಮಿತಿಯ ಸಂಚಾಲಕಿ ವಸಂತಿ ಕುಪ್ಪೆಪದವು ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಕರ್ನಾಟಕ ಪ್ರಾಂತ ರೈತ ಸಂಘದ ವಲಯ ಅಧ್ಯಕ್ಷ ಬಾಬು ಸಾಲ್ಯಾನ್, ಗುರುಪುರ ವಲಯ ಬೀಡಿ ಕಾರ್ಮಿಕರ ಸಂಘದ ಮುಖಂಡರಾದ ಹೊನ್ನಯ್ಯ ಅಮೀನ್, ವಾರಿಜ ಕುಪ್ಪೆಪದವು, ಹೋರಾಟ ಸಮಿತಿಯ ಸದಾಶಿವ ಕಟ್ಟೆಮಾರ್, ಜಮೀಲಾ ಮಾಣಿಪಳ್ಳ, ಮಜೀದ್ ಕಲ್ಲಾಡಿ, ಕುಸುಮಾ ಕುಪ್ಪೆಪದವು, ರಜಿಯಾ ಮಾಣಿಪಳ್ಳ, ಬಾಲಕೃಷ್ಣ ಶೆಟ್ಟಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು