5:14 PM Sunday22 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಕ್ರೈಸ್ತ ಸಮುದಾಯದ ಪರಮೋಚ್ಛ ಧಾರ್ಮಿಕ ನಾಯಕ ಪೋಪ್ ಫ್ರಾನ್ಸಿಸ್ ಇನ್ನಿಲ್ಲ: ಪ್ರಧಾನಿ ಮೋದಿ ಸಹಿತ ವಿಶ್ವದ ಹಲವು ಗಣ್ಯರ ಸಂತಾಪ

21/04/2025, 16:59

ವ್ಯಾಟಿಕನ್ ಸಿಟಿ (reporterkarnataka.com): ವಿನಮ್ರತೆ ಮತ್ತು ಬಡವರ ಬಗ್ಗೆ ಕಾಳಜಿಯಿಂದ ಜಗತ್ತನ್ನು ಮೋಡಿ ಮಾಡಿದ ಪೋಪ್ ಫ್ರಾನ್ಸಿಸ್ ಸೋಮವಾರ ನಿಧನರಾದರು ಎಂದು ವ್ಯಾಟಿಕನ್ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಸಹಿತ ವಿಶ್ವದ ಹಲವು ಗಣ್ಯರು ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.


88ರ ಹರೆಯದ ಪೋಪ್ ಅವರು 12 ವರ್ಷಗಳ ಕಾಲ ಪೋಪ್ ಪಟ್ಟವನ್ನು ಅಲಂಕರಿಸಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು. ಇತ್ತೀಚೆಗೆ ನ್ಯುಮೋನಿಯಾ ಪೀಡಿತರಾಗಿ ಗುಣಮುಖ ಹೊಂದಿದ್ದರು.
ಲ್ಯಾಟಿನ್ ಅಮೆರಿಕದಿಂದ ಪೋಪ್ ಪಟ್ಟವೇರಿದ ಮೊದಲಿಗರು ಅವರಾಗಿದ್ದಾರೆ.
ಅವರ ತಮ್ಮ ಸಂಪೂರ್ಣ ಜೀವನವನ್ನು ಭಗವಂತ ಮತ್ತು ಚರ್ಚ್‌ನ ಸೇವೆಗೆ ಸಮರ್ಪಿಸಿದ್ದರು.
“ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಪವಿತ್ರ ಫಾದರ್ ಫ್ರಾನ್ಸಿಸ್ ಅವರ ಮರಣವನ್ನು ನಾನು ತೀವ್ರ ದುಃಖದಿಂದ ಘೋಷಿಸಬೇಕಾಗಿದೆ” ಎಂದು ಕಾರ್ಡಿನಲ್ ಕೆವಿನ್ ಫಾರೆಲ್ ವ್ಯಾಟಿಕನ್‌ನ ಟಿವಿ ಚಾನೆಲ್‌ನಲ್ಲಿ ಘೋಷಿಸಿದ್ದಾರೆ.
ಅವರು ಈಸ್ಟರ್ ಸೋಮವಾರದಂದು ನಿಧನರಾದರು, ಈಸ್ಟರ್ ಭಾನುವಾರದಂದು ವ್ಯಾಟಿಕನ್‌ನಲ್ಲಿ ಭಕ್ತರ ಗುಂಪನ್ನು ಸಂತ ಪೀಟರ್ಸ್ ಬೆಸಿಲಿಕಾದಲ್ಲಿ ಬಾಲ್ಕನಿಯಲ್ಲಿ ಕಾಣಿಸಿಕೊಂಡು ಸಂತೋಷಪಡಿಸಿದ ಒಂದು ದಿನದ ನಂತರ ಮರಣ ಹೊಂದಿದರು.
ಇತ್ತೀಚಿಗೆ ಅಸ್ವಸ್ಥರಾದ ಪೋಪ್ ಫ್ರಾನ್ಸಿಸ್ ಅವರನ್ನು
ಫೆಬ್ರವರಿ 14ರಂದು ಬ್ರಾಂಕೈಟಿಸ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರದ ದಿನಗಳಲ್ಲಿ, ಪೋಪ್ ಅವರಿಗೆ ಡಬ್ಬಲ್ ನ್ಯುಮೋನಿಯಾ ಇರುವುದು ಪತ್ತೆಯಾಯಿತು. ನಂತರ ಗುಣಮುಖರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು