8:40 PM Tuesday22 - April 2025
ಬ್ರೇಕಿಂಗ್ ನ್ಯೂಸ್
Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ

ಇತ್ತೀಚಿನ ಸುದ್ದಿ

Food & Civil supply | ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಜೋಳ ಖರೀದಿಸಲು ತೀರ್ಮಾನ: ಆಹಾರ ಸಚಿವ ಕೆ.ಎಚ್. ಮುನಿಯಪ್ಪ

22/04/2025, 20:36

ಬೆಂಗಳೂರು(reporterkarnataka.com): ಆಹಾರ ನಾಗರಿಕ‌ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಮತ್ತು ವಸತಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ರವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ವಿಧಾನ ಸೌಧದದಲ್ಲಿ ಸಭೆ ನಡೆಯಿತು.


ಬಳ್ಳಾರಿ ಜಿಲ್ಲೆಯ ರೈತರ ನಿಯೋಗವು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಯಲ್ಲಿ ಹೆಚ್ಚಾಗಿ ಜೋಳ ಬೆಳೆಯವ ಜಿಲ್ಲೆಗಳು ಹಾಗೂ ರಾಜ್ಯದಾದ್ಯಂತ ಹಿಂಗಾರು ಹಂಗಾಮಿನ ಅವಧಿಯಲ್ಲಿ ಹೆಚ್ಚಿನ ಜೋಳವನ್ನು ಬೆಳೆಯುವ ಜಿಲ್ಲೆಗಳಲ್ಲಿ ಸರ್ಕಾರದ ವತಿಯಿಂದ ಬೆಂಬಲ ಬೆಲೆ ಯೋಜನೆಯಡಿ 2024-2025 ನೇ ಸಾಲಿನಲ್ಲಿ ಒಂದು ಲಕ್ಷ ಕ್ವಿಂಟಾಲ್ (LMT) ಜೋಳವನ್ನು ರೈತರಿಂದ ನೇರವಾಗಿ ಖರೀದಿ ಕೇಂದ್ರಗಳ ಮೂಲಕ ಖರೀದಿಸಲು ತೀರ್ಮಾನಿಸಿದ್ದು, ಪ್ರತಿ ಕ್ವಿಂಟಾಲ್ ಜೋಳದ ದರ ಹೈಬ್ರೀಡ್ 3371 ಮಾಲ್ದಂಡಿ ಜೋಳಕ್ಕೆ ಪ್ರತಿ ಕ್ವಿಂಟಾಲ್ ಗೆ 3421ದರವನ್ನು ನಿಗಧಿಪಡಿಸಲಾಗಿದೆ.
ಈಗಾಗಲೇ ನೊಂದಾಯಿಸಿದ ರೈತರು ಹಾಗೂ ಹೊಸದಾಗಿ ನೊಂದಾಯಿಸುವ ರೈತರು ಸಹ ತಾವು ಬೆಳೆದ ಬೆಲೆಯನ್ನು ನಿರ್ದಿಷ್ಟ ಖರೀದಿ ಕೇಂದ್ರದ ಸ್ಥಳದಲ್ಲಿ ನೊಂದಣಿ ಮಾಡಿಕೊಂಡು ಸರ್ಕಾರಕ್ಕೆ ನೀಡಲು ಕೋರಿದೆ ಎಂದರು.
ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಪ್ರತಿ ವ್ಯಕ್ತಿಗೆ 5 ಕೆಜಿ ಪಡಿತರ ಧಾನ್ಯ ನೀಡುತ್ತಿದ್ದು ಉತ್ತರ ಕರ್ನಾಟಕದ ಭಾಗದಲ್ಲಿ 2 ಕೆಜಿ ಅಕ್ಕಿಯ ಜೊತೆಗೆ 3 ಕೆಜಿ ಜೋಳವನ್ನು ವಿತರಿಸಲು ತೀರ್ಮಾನಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ನ ಸದಸ್ಯ ಬಸನಗೌಡ ಬಾದರ್ಲಿ, ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಆಹಾರ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್ ಸೇರಿದಂತೆ ಹಾಗೂ ರೈತ ಸಂಘದ ರಘುನಾಥ್, ಮಾದವ ರೆಡ್ಡಿ ಕರೂರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು