3:19 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ನಿಲ್ಲದ ಬಿಜೆಪಿ – ಶಿವಸೇನೆ ಜಟಾಪಟಿ; ಮುಖ್ಯಮಂತ್ರಿ ಠಾಕ್ರೆ ವಿರುದ್ಧ ಕಮಲ ಪಾಳಯದಿಂದ ದೂರು ದಾಖಲು

29/08/2021, 16:45

ಮುಂಬೈ(reporterkarnataka.com): ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ನಡುವಿನ ಜಗಳ ಸದ್ಯಕ್ಕೆ ನಿಲ್ಲುವ ಲಕ್ಷಣ ಕಂಡು ಬರುತ್ತಿಲ್ಲ. ವಿವಾದಾತ್ಮಕ ಹೇಳಿಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಾರಾಯಣ ರಾಣೆ ವಿರುದ್ಧ ಶಿವಸೇನೆ ಪ್ರಕರಣ ದಾಖಲಿಸುತ್ತಿದ್ದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಮುಖ್ಯಮಂತ್ರಿ ಈ ಹಿಂದೆ ನೀಡಿದ್ದಾರೆ ಎನ್ನಲಾದ ನಿಂದನಾತ್ಮಕ ಹೇಳಿಕೆ ಸಂಬಂಧಿಸಿದಂತೆ ವಿರುದ್ಧ ದೂರು ನೀಡಲಾಗಿದೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಅವರ ಪತ್ನಿ, ‘ಸಾಮ್ನಾ’ ಸಂಪಾದಕಿ ರಶ್ಮಿ ಠಾಕ್ರೆ ಮತ್ತು ಯುವ ಸೇನೆ ಅಧ್ಯಕ್ಷ ವರುಣ್ ಸರ್ದೇಸಾಯಿ ವಿರುದ್ಧ ಬಿಜೆಪಿ ನಾಯಕರು ದೂರು ದಾಖಲಿಸಿದ್ದಾರೆ. ಠಾಕ್ರೆ ವಿರುದ್ಧ ವಿವಾದಾತ್ಮಕ ಟೀಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ನಾರಾಯಣ್ ರಾಣೆ ಅವರನ್ನು ಮಹಾರಾಷ್ಟ್ರದಲ್ಲಿ ಪೊಲೀಸರು ಬಂಧಿಸಿದ ಪ್ರಕರಣದ ಬೆನ್ನಲ್ಲೇ ಈ ದೂರುಗಳು ದಾಖಲಾಗಿದೆ. ಒಟ್ಟು ಮೂರು ದೂರುಗಳು ದಾಖಲಾಗಿದ್ದು, ಬಿಜೆಪಿ ನಾಯಕರು ನಾಸಿಕ್‌ನಲ್ಲಿ ದೂರು ಸಲ್ಲಿಸಿದ್ದಾರೆ. 

ರಿಷಿಕೇಶ್ ಅವರು ಸಿಎಂ  ಉದ್ಧವ್ ಠಾಕ್ರೆ ಹಾಗೂ ವರುಣ್ ಸರ್ದೇಸಾಯಿ ವಿರುದ್ಧ ಮೊದಲ ದೂರು ದಾಖಲಿಸಿದ್ದಾರೆ. ಸರ್ದೇಸಾಯಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 153 (ಎ), 107, 212 ಮತ್ತು ಸೈಬರ್ ಅಪರಾಧ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸುನೀಲ್ ರಘುನಾಥ ಕೇದಾರ್ ಅವರು ಎರಡನೆಯ ದೂರು ಉದ್ಧವ್ ಠಾಕ್ರೆ ವಿರುದ್ಧ ದಾಖಲಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಠಾಕ್ರೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಠಾಕ್ರೆ ಮುಖ್ಯಮಂತ್ರಿಯಾಗುವುದಕ್ಕೂ ಮೊದಲು, 2018ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಒಂದು ವಿಡಿಯೋ ವೈರಲ್ ಆಗಿತ್ತು. ಅದರಲ್ಲಿ ಶಿವಾಜಿಯ ಪ್ರತಿಮೆಗೆ ಮಾಲಾರ್ಪಣೆ ಮಾಡುವಾಗ ಪಾದರಕ್ಷೆ ಧರಿಸಿದ್ದ ಯೋಗಿ ಆದಿತ್ಯನಾಥ್​ಗೆ ಅದೇ ಚಪ್ಪಲಿಯಿಂದ ಹೊಡೆಯಬೇಕು ಎಂದು ಠಾಕ್ರೆ ಹೇಳಿದ್ದರು. ಇದನ್ನು ಉಲ್ಲೇಖಿಸಿರುವ ದೂರುದಾರರು, ಆದಿತ್ಯನಾಥ್ ಯುಪಿಯ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಮಾತ್ರವಲ್ಲ, ಗೋರಖ್‌ಪುರ ಮಠದ ಪ್ರಧಾನ ಅರ್ಚಕ ಕೂಡ ಆಗಿದ್ದಾರೆ. ಆದ್ದರಿಂದ ಅನೇಕ ಹಿಂದೂಗಳ ಭಾವನೆಗಳಿಗೆ ಠಾಕ್ರೆ ನಡೆಯಿಂದ ನೋವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಶಿವಸೇನೆಯ ಮುಖವಾಣಿ ‘ಸಾಮ್ನಾ’ದಲ್ಲಿ ಬುಧವಾರ ಪ್ರಕಟವಾದ ಸಂಪಾದಕೀಯದಲ್ಲಿ, ರಾಣೆ ವಿರುದ್ಧ ಅನೇಕ ನಿಂದನೀಯ ಪದಗಳನ್ನು ಬಳಸಲಾಗಿದೆ, ಇದು ಅವರು ಹೊಂದಿರುವ ಕೇಂದ್ರ ಸಚಿವರ ಸಾಂವಿಧಾನಿಕ ಹುದ್ದೆಗೆ ‘ಅವಮಾನ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು