3:31 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ನಿಲ್ಲದ ಬಿಜೆಪಿ – ಶಿವಸೇನೆ ಜಟಾಪಟಿ; ಮುಖ್ಯಮಂತ್ರಿ ಠಾಕ್ರೆ ವಿರುದ್ಧ ಕಮಲ ಪಾಳಯದಿಂದ ದೂರು ದಾಖಲು

29/08/2021, 16:45

ಮುಂಬೈ(reporterkarnataka.com): ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ನಡುವಿನ ಜಗಳ ಸದ್ಯಕ್ಕೆ ನಿಲ್ಲುವ ಲಕ್ಷಣ ಕಂಡು ಬರುತ್ತಿಲ್ಲ. ವಿವಾದಾತ್ಮಕ ಹೇಳಿಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಾರಾಯಣ ರಾಣೆ ವಿರುದ್ಧ ಶಿವಸೇನೆ ಪ್ರಕರಣ ದಾಖಲಿಸುತ್ತಿದ್ದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಮುಖ್ಯಮಂತ್ರಿ ಈ ಹಿಂದೆ ನೀಡಿದ್ದಾರೆ ಎನ್ನಲಾದ ನಿಂದನಾತ್ಮಕ ಹೇಳಿಕೆ ಸಂಬಂಧಿಸಿದಂತೆ ವಿರುದ್ಧ ದೂರು ನೀಡಲಾಗಿದೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಅವರ ಪತ್ನಿ, ‘ಸಾಮ್ನಾ’ ಸಂಪಾದಕಿ ರಶ್ಮಿ ಠಾಕ್ರೆ ಮತ್ತು ಯುವ ಸೇನೆ ಅಧ್ಯಕ್ಷ ವರುಣ್ ಸರ್ದೇಸಾಯಿ ವಿರುದ್ಧ ಬಿಜೆಪಿ ನಾಯಕರು ದೂರು ದಾಖಲಿಸಿದ್ದಾರೆ. ಠಾಕ್ರೆ ವಿರುದ್ಧ ವಿವಾದಾತ್ಮಕ ಟೀಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ನಾರಾಯಣ್ ರಾಣೆ ಅವರನ್ನು ಮಹಾರಾಷ್ಟ್ರದಲ್ಲಿ ಪೊಲೀಸರು ಬಂಧಿಸಿದ ಪ್ರಕರಣದ ಬೆನ್ನಲ್ಲೇ ಈ ದೂರುಗಳು ದಾಖಲಾಗಿದೆ. ಒಟ್ಟು ಮೂರು ದೂರುಗಳು ದಾಖಲಾಗಿದ್ದು, ಬಿಜೆಪಿ ನಾಯಕರು ನಾಸಿಕ್‌ನಲ್ಲಿ ದೂರು ಸಲ್ಲಿಸಿದ್ದಾರೆ. 

ರಿಷಿಕೇಶ್ ಅವರು ಸಿಎಂ  ಉದ್ಧವ್ ಠಾಕ್ರೆ ಹಾಗೂ ವರುಣ್ ಸರ್ದೇಸಾಯಿ ವಿರುದ್ಧ ಮೊದಲ ದೂರು ದಾಖಲಿಸಿದ್ದಾರೆ. ಸರ್ದೇಸಾಯಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 153 (ಎ), 107, 212 ಮತ್ತು ಸೈಬರ್ ಅಪರಾಧ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸುನೀಲ್ ರಘುನಾಥ ಕೇದಾರ್ ಅವರು ಎರಡನೆಯ ದೂರು ಉದ್ಧವ್ ಠಾಕ್ರೆ ವಿರುದ್ಧ ದಾಖಲಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಠಾಕ್ರೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಠಾಕ್ರೆ ಮುಖ್ಯಮಂತ್ರಿಯಾಗುವುದಕ್ಕೂ ಮೊದಲು, 2018ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಒಂದು ವಿಡಿಯೋ ವೈರಲ್ ಆಗಿತ್ತು. ಅದರಲ್ಲಿ ಶಿವಾಜಿಯ ಪ್ರತಿಮೆಗೆ ಮಾಲಾರ್ಪಣೆ ಮಾಡುವಾಗ ಪಾದರಕ್ಷೆ ಧರಿಸಿದ್ದ ಯೋಗಿ ಆದಿತ್ಯನಾಥ್​ಗೆ ಅದೇ ಚಪ್ಪಲಿಯಿಂದ ಹೊಡೆಯಬೇಕು ಎಂದು ಠಾಕ್ರೆ ಹೇಳಿದ್ದರು. ಇದನ್ನು ಉಲ್ಲೇಖಿಸಿರುವ ದೂರುದಾರರು, ಆದಿತ್ಯನಾಥ್ ಯುಪಿಯ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಮಾತ್ರವಲ್ಲ, ಗೋರಖ್‌ಪುರ ಮಠದ ಪ್ರಧಾನ ಅರ್ಚಕ ಕೂಡ ಆಗಿದ್ದಾರೆ. ಆದ್ದರಿಂದ ಅನೇಕ ಹಿಂದೂಗಳ ಭಾವನೆಗಳಿಗೆ ಠಾಕ್ರೆ ನಡೆಯಿಂದ ನೋವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಶಿವಸೇನೆಯ ಮುಖವಾಣಿ ‘ಸಾಮ್ನಾ’ದಲ್ಲಿ ಬುಧವಾರ ಪ್ರಕಟವಾದ ಸಂಪಾದಕೀಯದಲ್ಲಿ, ರಾಣೆ ವಿರುದ್ಧ ಅನೇಕ ನಿಂದನೀಯ ಪದಗಳನ್ನು ಬಳಸಲಾಗಿದೆ, ಇದು ಅವರು ಹೊಂದಿರುವ ಕೇಂದ್ರ ಸಚಿವರ ಸಾಂವಿಧಾನಿಕ ಹುದ್ದೆಗೆ ‘ಅವಮಾನ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು