7:27 PM Saturday2 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ರಾಯಲ್ಪಾಡು ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಭೇಟಿ 

22/05/2021, 15:15

ಶ್ರೀನಿವಾಸಪುರ(reporterkarnataka news) : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಗ್ರಾಮದ ಶ್ರೀ ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಹಿಂದೆ ಸಹ  ರಾಜ್ಯದ ಪ್ರಮುಖ ರಾಜಕಾರಣಿಗಳು ಹಾಗೂ ಹೊರರಾಜ್ಯದ ಮಹಾರಾಷ್ಟ್ರ ,ಆಂಧ್ರಪ್ರದೇಶ, ತಮಿಳುನಾಡು ,ರಾಜಕಾರಣಿಗಳು ಸಹ ದೇವರ ದರ್ಶನ ಪಡೆದಿದ್ದಾರೆ. ಚಿತ್ರನಟ ಚಿರಂಜೀವಿ ಅವರು ಸಹ ಪ್ರಸಿದ್ಧ ಜ್ಯೋತಿಷ ತಜ್ಞರಾದ ವೆಲ್ಲಾಲ ಸತ್ಯ ನಾರಾಯಣ ಶಾಸ್ತ್ರಿ ಬಳಿ ಭವಿಷ್ಯದ ಬಗ್ಗೆ ಚರ್ಚೆ ಆಶೀರ್ವಾದ ಪಡೆದು ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ.  ಡಿ.ಕೆ.ಶಿವಕುಮಾರ್‌ ದೇವರ ದರ್ಶನ ಪಡೆದರು.  ಅರ್ಚಕರಾದ ವಿಶ್ವನಾಥ ಶಾಸ್ತ್ರಿ ಅವರು ವಿಶೇಷ ಪೂಜೆ ನೆರವೇರಿಸಿದರು . ನಂತರ ಪ್ರಸಿದ್ಧ ಜ್ಯೋತಿಷ ಶಾಸ್ತ್ರ ತಜ್ಞರಾದ ವೆಲ್ಲಾಲ ಸತ್ಯನಾರಾಯಣ ಶಾಸ್ತ್ರ ಬಳಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಾಜ್ಯ ಭವಿಷ್ಯದ ಬಗ್ಗೆ ಚರ್ಚೆ ನಡೆಸಿದರು. ನಂತರ ಅವರನ್ನು ವೆಲ್ಲಾಲ ಸತ್ಯ ನಾರಾಯಣ ಶಾಸ್ತ್ರಿ ಮತ್ತು ಸಹೋದರ ವಿಶ್ವನಾಥ ಶಾಸ್ತ್ರಿ ಅವರು ದೇವಸ್ಥಾನ ಆವರಣದಲ್ಲಿ ಸನ್ಮಾನಿಸಿದರು. ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ , ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ , ನಿರ್ದೇಶಕ ಅನಿಲ್‌ಕುಮಾರ್‌ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು