9:06 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ…

ಇತ್ತೀಚಿನ ಸುದ್ದಿ

ರಾಯಲ್ಪಾಡು ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಭೇಟಿ 

22/05/2021, 15:15

ಶ್ರೀನಿವಾಸಪುರ(reporterkarnataka news) : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಗ್ರಾಮದ ಶ್ರೀ ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಹಿಂದೆ ಸಹ  ರಾಜ್ಯದ ಪ್ರಮುಖ ರಾಜಕಾರಣಿಗಳು ಹಾಗೂ ಹೊರರಾಜ್ಯದ ಮಹಾರಾಷ್ಟ್ರ ,ಆಂಧ್ರಪ್ರದೇಶ, ತಮಿಳುನಾಡು ,ರಾಜಕಾರಣಿಗಳು ಸಹ ದೇವರ ದರ್ಶನ ಪಡೆದಿದ್ದಾರೆ. ಚಿತ್ರನಟ ಚಿರಂಜೀವಿ ಅವರು ಸಹ ಪ್ರಸಿದ್ಧ ಜ್ಯೋತಿಷ ತಜ್ಞರಾದ ವೆಲ್ಲಾಲ ಸತ್ಯ ನಾರಾಯಣ ಶಾಸ್ತ್ರಿ ಬಳಿ ಭವಿಷ್ಯದ ಬಗ್ಗೆ ಚರ್ಚೆ ಆಶೀರ್ವಾದ ಪಡೆದು ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ.  ಡಿ.ಕೆ.ಶಿವಕುಮಾರ್‌ ದೇವರ ದರ್ಶನ ಪಡೆದರು.  ಅರ್ಚಕರಾದ ವಿಶ್ವನಾಥ ಶಾಸ್ತ್ರಿ ಅವರು ವಿಶೇಷ ಪೂಜೆ ನೆರವೇರಿಸಿದರು . ನಂತರ ಪ್ರಸಿದ್ಧ ಜ್ಯೋತಿಷ ಶಾಸ್ತ್ರ ತಜ್ಞರಾದ ವೆಲ್ಲಾಲ ಸತ್ಯನಾರಾಯಣ ಶಾಸ್ತ್ರ ಬಳಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಾಜ್ಯ ಭವಿಷ್ಯದ ಬಗ್ಗೆ ಚರ್ಚೆ ನಡೆಸಿದರು. ನಂತರ ಅವರನ್ನು ವೆಲ್ಲಾಲ ಸತ್ಯ ನಾರಾಯಣ ಶಾಸ್ತ್ರಿ ಮತ್ತು ಸಹೋದರ ವಿಶ್ವನಾಥ ಶಾಸ್ತ್ರಿ ಅವರು ದೇವಸ್ಥಾನ ಆವರಣದಲ್ಲಿ ಸನ್ಮಾನಿಸಿದರು. ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ , ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ , ನಿರ್ದೇಶಕ ಅನಿಲ್‌ಕುಮಾರ್‌ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು