6:55 AM Wednesday5 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ ಮುಂದುವರಿದ ಶೋಧ

23/04/2025, 12:10

ಶ್ರೀನಗರ(reporterkarnataka.com)

ಕಾಶ್ಮೀರದಲ್ಲಿ ಮತ್ತೊಮ್ಮೆ ಉಗ್ರರ ಅಟ್ಟಹಾಸ ಆರಂಭಗೊಂಡಿದ್ದು, ಪ್ರತಿಯಾಗಿ ಭಾರತೀಯ ಸೇನೆ ಕ್ಷಿಪ್ರ ಕಾರ್ಯಾಚರಣೆ ಮುಂದುವರಿಸಿದೆ.

ಮಂಗಳವಾರ ಮಧ್ಯಾಹ್ನ ಅನಂತ್‌ನಾಗ್ ಜಿಲ್ಲೆಯ ಪಹಲ್‌ಗಾಂ‌ನಲ್ಲಿ ಬೈಸಾರನ್ ಕಾಡು ಪ್ರದೇಶದ ಟ್ರಕಿಂಗ್‌ನಲ್ಲಿ ನಿರತ ಸುಮಾರು 500ಕ್ಕೂ ಅಧಿಕ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರ ತಂಡ ದಾಳಿ ಮಾಡಿದ್ದು, 26ಕ್ಕೂ ಅಧಿಕ ಮಂದಿ ಅಸುನೀಗಿದ್ದಾರೆ.

ಪ್ರತಿಯಾಗಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ಬೈಸರನ್‌ನಿಂದ ದೂರ ಬಾರಮುಲ್ಲ ಜಿಲ್ಲೆಯ ಉರಿ ನಾಳದ ಸರ್ಜೀವನ್ ಪ್ರದೇಶದಲ್ಲಿ ನಡೆದ ಸೇನೆ ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಎರಡು AK 47 ಗನ್, ಒಂದು ಪಿಸ್ತೂಲ್, ಐಇಡಿ ಸ್ಪೋಟಕವನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ. ಉಗ್ರರ ವಿವಿರ ಸೇರಿದಂತೆ ಇನ್ನಷ್ಟು ನಿಖರ ಮಾಹಿತಿಗಳ ನಿರೀಕ್ಷೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು