2:02 PM Monday3 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

Water Metro | ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ ರಾಜ್ಯ ಸರಕಾರ ಅನುಮೋದನೆ

23/04/2025, 20:01

ಮಂಗಳೂರು(reporterkarnataka.com): ಮಂಗಳೂರಿನ ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆ ಕಾರ್ಯಗತ ಗೊಳಿಸುವ ಪ್ರಸ್ತಾವನೆಗೆ ರಾಜ್ಯ ಸರಕಾರ ಅನುಮೋದನೆ
ನೀಡಿದೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿಯಲ್ಲಿ ನಡೆದ ಕರ್ನಾಟಕ ಜಲಸಾರಿಗೆ ಮಂಡಳಿಯ ಸಭೆಯಲ್ಲಿ ಮುಖ್ಯಮಂತ್ರಿ ಒಪ್ಪಿಗೆ ನೀಡಿದರು.
*ಮುಖ್ಯಾಂಶಗಳು:*

* ರಾಜ್ಯದ ಬಂದರುಗಳು ಅಭಿವೃದ್ಧಿ, ಜಲಸಾರಿಗೆ ಯೋಜನೆಗಳ ಪ್ರಗತಿ, ಸರಕು ಸಾಗಣೆಗೆ ಅವಶ್ಯವಿರುವ ಮೂಲ ಸೌಲಭ್ಯಗಳ ಬಗ್ಗೆ ಸಮಿತಿಯಲ್ಲಿ ಚರ್ಚಿಸಲಾಯಿತು.

* ಮಂಗಳೂರಿನ ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್  ಮೆಟ್ರೋ ಯೋಜನೆ  ಕಾರ್ಯಗತ ಗೊಳಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿದರು.

* ಸಾಗರಮಾಲಾ ಯೋಜನೆಯಡಿಯಲ್ಲಿ  ಮಂಗಳೂರಿನಲ್ಲಿ ಕರ್ನಾಟಕ ಜಲಸಾರಿಗೆ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಪ್ರಸ್ತಾವನೆಗೆ ಮುಖ್ಯಮಂತ್ರಿಯವರು ಒಪ್ಪಿಗೆ ನೀಡಿದರು.

* ಪುನರ್ವಸತಿ, ಬಂದರು ಸಂಬಂಧಿತ ಕಾರ್ಯಾಚರಣೆಗಳಿಗೆ ಭೂಮಿ ಹಂಚಿಕೆ ಗುತ್ತಿಗೆ ಅವಧಿಯನ್ನು ಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದು ಜತೆಗೆ ಅತಿಕ್ರಮಣ ಮಾಡಿಕೊಂಡಿರುವವರನ್ನು ಕೂಡಲೇ ಎತ್ತಂಗಡಿ ಮಾಡುವಂತೆ ಸಿಎಂ ಸೂಚಿಸಿದರು.

* ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುತಿಸಲಾಗಿರುವ ದ್ವೀಪಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಡ್ರೋಣ್ ಸರ್ವೇ ಮಾಡಿಸಿ
ಇನ್ನು ಮೂರು ತಿಂಗಳ ಒಳಗಾಗಿ ವರದಿ ನೀಡುವಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

* ಆಂಧ್ರ ಪ್ರದೇಶ, ವಿಶಾಖಪಟ್ಟಣ, ಕೇರಳ, ತಮಿಳು ನಾಡು, ಗುಜರಾತ್ ಗಳಲ್ಲಿ ಬಂದರುಗಳು ಹೇಗೆ ಕಾರ್ಯನಿರ್ವ ಹಿಸುತ್ತಿವೆ ಎಂಬುದರ ಬಗ್ಗೆ ಅಧ್ಯಯನ ಮಾಡಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ
ಸೂಚನೆ ನೀಡಿದ್ದು ಮುಂದಿನ ದಿನಗಳಲ್ಲಿ ರಾಜ್ಯದ ಬಂದರು ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ, ಸೌಲಭ್ಯ ನೀಡುವುದಾಗಿ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು