6:47 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

Water Metro | ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ ರಾಜ್ಯ ಸರಕಾರ ಅನುಮೋದನೆ

23/04/2025, 20:01

ಮಂಗಳೂರು(reporterkarnataka.com): ಮಂಗಳೂರಿನ ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆ ಕಾರ್ಯಗತ ಗೊಳಿಸುವ ಪ್ರಸ್ತಾವನೆಗೆ ರಾಜ್ಯ ಸರಕಾರ ಅನುಮೋದನೆ
ನೀಡಿದೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿಯಲ್ಲಿ ನಡೆದ ಕರ್ನಾಟಕ ಜಲಸಾರಿಗೆ ಮಂಡಳಿಯ ಸಭೆಯಲ್ಲಿ ಮುಖ್ಯಮಂತ್ರಿ ಒಪ್ಪಿಗೆ ನೀಡಿದರು.
*ಮುಖ್ಯಾಂಶಗಳು:*

* ರಾಜ್ಯದ ಬಂದರುಗಳು ಅಭಿವೃದ್ಧಿ, ಜಲಸಾರಿಗೆ ಯೋಜನೆಗಳ ಪ್ರಗತಿ, ಸರಕು ಸಾಗಣೆಗೆ ಅವಶ್ಯವಿರುವ ಮೂಲ ಸೌಲಭ್ಯಗಳ ಬಗ್ಗೆ ಸಮಿತಿಯಲ್ಲಿ ಚರ್ಚಿಸಲಾಯಿತು.

* ಮಂಗಳೂರಿನ ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್  ಮೆಟ್ರೋ ಯೋಜನೆ  ಕಾರ್ಯಗತ ಗೊಳಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿದರು.

* ಸಾಗರಮಾಲಾ ಯೋಜನೆಯಡಿಯಲ್ಲಿ  ಮಂಗಳೂರಿನಲ್ಲಿ ಕರ್ನಾಟಕ ಜಲಸಾರಿಗೆ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಪ್ರಸ್ತಾವನೆಗೆ ಮುಖ್ಯಮಂತ್ರಿಯವರು ಒಪ್ಪಿಗೆ ನೀಡಿದರು.

* ಪುನರ್ವಸತಿ, ಬಂದರು ಸಂಬಂಧಿತ ಕಾರ್ಯಾಚರಣೆಗಳಿಗೆ ಭೂಮಿ ಹಂಚಿಕೆ ಗುತ್ತಿಗೆ ಅವಧಿಯನ್ನು ಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದು ಜತೆಗೆ ಅತಿಕ್ರಮಣ ಮಾಡಿಕೊಂಡಿರುವವರನ್ನು ಕೂಡಲೇ ಎತ್ತಂಗಡಿ ಮಾಡುವಂತೆ ಸಿಎಂ ಸೂಚಿಸಿದರು.

* ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುತಿಸಲಾಗಿರುವ ದ್ವೀಪಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಡ್ರೋಣ್ ಸರ್ವೇ ಮಾಡಿಸಿ
ಇನ್ನು ಮೂರು ತಿಂಗಳ ಒಳಗಾಗಿ ವರದಿ ನೀಡುವಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

* ಆಂಧ್ರ ಪ್ರದೇಶ, ವಿಶಾಖಪಟ್ಟಣ, ಕೇರಳ, ತಮಿಳು ನಾಡು, ಗುಜರಾತ್ ಗಳಲ್ಲಿ ಬಂದರುಗಳು ಹೇಗೆ ಕಾರ್ಯನಿರ್ವ ಹಿಸುತ್ತಿವೆ ಎಂಬುದರ ಬಗ್ಗೆ ಅಧ್ಯಯನ ಮಾಡಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ
ಸೂಚನೆ ನೀಡಿದ್ದು ಮುಂದಿನ ದಿನಗಳಲ್ಲಿ ರಾಜ್ಯದ ಬಂದರು ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ, ಸೌಲಭ್ಯ ನೀಡುವುದಾಗಿ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು