4:42 PM Friday6 - March 2026
ಬ್ರೇಕಿಂಗ್ ನ್ಯೂಸ್
ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ…

ಇತ್ತೀಚಿನ ಸುದ್ದಿ

Water Metro | ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ ರಾಜ್ಯ ಸರಕಾರ ಅನುಮೋದನೆ

23/04/2025, 20:01

ಮಂಗಳೂರು(reporterkarnataka.com): ಮಂಗಳೂರಿನ ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆ ಕಾರ್ಯಗತ ಗೊಳಿಸುವ ಪ್ರಸ್ತಾವನೆಗೆ ರಾಜ್ಯ ಸರಕಾರ ಅನುಮೋದನೆ
ನೀಡಿದೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿಯಲ್ಲಿ ನಡೆದ ಕರ್ನಾಟಕ ಜಲಸಾರಿಗೆ ಮಂಡಳಿಯ ಸಭೆಯಲ್ಲಿ ಮುಖ್ಯಮಂತ್ರಿ ಒಪ್ಪಿಗೆ ನೀಡಿದರು.
*ಮುಖ್ಯಾಂಶಗಳು:*

* ರಾಜ್ಯದ ಬಂದರುಗಳು ಅಭಿವೃದ್ಧಿ, ಜಲಸಾರಿಗೆ ಯೋಜನೆಗಳ ಪ್ರಗತಿ, ಸರಕು ಸಾಗಣೆಗೆ ಅವಶ್ಯವಿರುವ ಮೂಲ ಸೌಲಭ್ಯಗಳ ಬಗ್ಗೆ ಸಮಿತಿಯಲ್ಲಿ ಚರ್ಚಿಸಲಾಯಿತು.

* ಮಂಗಳೂರಿನ ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್  ಮೆಟ್ರೋ ಯೋಜನೆ  ಕಾರ್ಯಗತ ಗೊಳಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿದರು.

* ಸಾಗರಮಾಲಾ ಯೋಜನೆಯಡಿಯಲ್ಲಿ  ಮಂಗಳೂರಿನಲ್ಲಿ ಕರ್ನಾಟಕ ಜಲಸಾರಿಗೆ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಪ್ರಸ್ತಾವನೆಗೆ ಮುಖ್ಯಮಂತ್ರಿಯವರು ಒಪ್ಪಿಗೆ ನೀಡಿದರು.

* ಪುನರ್ವಸತಿ, ಬಂದರು ಸಂಬಂಧಿತ ಕಾರ್ಯಾಚರಣೆಗಳಿಗೆ ಭೂಮಿ ಹಂಚಿಕೆ ಗುತ್ತಿಗೆ ಅವಧಿಯನ್ನು ಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದು ಜತೆಗೆ ಅತಿಕ್ರಮಣ ಮಾಡಿಕೊಂಡಿರುವವರನ್ನು ಕೂಡಲೇ ಎತ್ತಂಗಡಿ ಮಾಡುವಂತೆ ಸಿಎಂ ಸೂಚಿಸಿದರು.

* ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುತಿಸಲಾಗಿರುವ ದ್ವೀಪಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಡ್ರೋಣ್ ಸರ್ವೇ ಮಾಡಿಸಿ
ಇನ್ನು ಮೂರು ತಿಂಗಳ ಒಳಗಾಗಿ ವರದಿ ನೀಡುವಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

* ಆಂಧ್ರ ಪ್ರದೇಶ, ವಿಶಾಖಪಟ್ಟಣ, ಕೇರಳ, ತಮಿಳು ನಾಡು, ಗುಜರಾತ್ ಗಳಲ್ಲಿ ಬಂದರುಗಳು ಹೇಗೆ ಕಾರ್ಯನಿರ್ವ ಹಿಸುತ್ತಿವೆ ಎಂಬುದರ ಬಗ್ಗೆ ಅಧ್ಯಯನ ಮಾಡಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ
ಸೂಚನೆ ನೀಡಿದ್ದು ಮುಂದಿನ ದಿನಗಳಲ್ಲಿ ರಾಜ್ಯದ ಬಂದರು ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ, ಸೌಲಭ್ಯ ನೀಡುವುದಾಗಿ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು