6:17 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಫಹಲ್ಗಾಮ್ ಘಟನೆ ಮಾನವ ಕುಲಕ್ಕೆ ಮಾರಕ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

23/04/2025, 21:05

ಮಂಗಳೂರು(reporterkarnataka.com): ಕಾಶ್ಮೀರದ ಫಹಲ್ಗಾಮ್‌ನಲ್ಲಿ ಉಗ್ರವಾದಿಗಳಿಂದ ನಡೆದ ಪ್ರವಾಸಿಗರ ಹತ್ಯೆಯ ಹೃದಯ ವಿದ್ರಾವಕ ಘಟನೆ ಇಡೀ ಮಾನವ ಕುಲಕೆ ಮಾರಕ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
ಪದ್ಮರಾಜ್ ಆರ್. ಪೂಜಾರಿ ಪ್ರತಿಕ್ರಿಯಿಸಿದ್ದಾರೆ.
ನ್ಯಾಯ, ನೀತಿ ಮತ್ತು ಶಾಂತಿ ಬಯಸುವ ಸವಾಜದಲ್ಲಿ ಹಿಂಸೆಗೆ ಸ್ಥಾನ ಇರಬಾರದು. ಪ್ರತಿಯೊಂದು ಜೀವವೂ ಅಮೂಲ್ಯವಾಗಿದ್ದು, ಜೀವ ನಷ್ಟವು ನಮ್ಮ ಸಾಮೂಹಿಕ ಆತ್ಮಸಾಕ್ಷಿಗೆ ಆದ ಗಾಯ. ಅಮಾಯಕರ ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಅವಾಯಕರ ಜೀವಗಳನ್ನು ಬಲಿಯಾಗಿಸಿ, ಅನೇಕ ಕುಟುಂಬಗಳನ್ನೇ ನಾಶ ಮಾಡಿರುವುದು ಹಿಂಸಾಚಾರವಷ್ಟೇ ಅಲ್ಲ. ಸಂಪೂರ್ಣ ಅವಾನವೀಯ ಕೃತ್ಯ. ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ಕೆಟ್ಟ ಬೆಳವಣಿಗೆ. ಈ ವಿಚಾರದಲ್ಲಿ ನಾವು ಪಕ್ಷ ಭೇದ ಮರೆತು ಕೇಂದ್ರ ಸರ್ಕಾರದ ಪರ ನಿಲ್ಲುತ್ತೇವೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರೂ ಅವುಗಳನ್ನು ಬುಡಸಮೇತ ಕಿತ್ತೊಗೆಯುವ ಕೆಲಸವಾಗಬೇಕು. ಅಮಾಯಕರನ್ನು ಕೊಂದ ಉಗ್ರರಿಗೆ ಕೇಂದ್ರ ಸರ್ಕಾರ ತಕ್ಕ ಉತ್ತರ ನೀಡಬೇಕು. ಮತ್ತು ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು. ಎಂದು ಈ ಮೂಲಕ ಆಗ್ರಹಿಸುತ್ತೇನೆ. ದುರ್ಘಟನೆಯಲ್ಲಿ ಮೃತರ ಕುಟುಂಬಗಳಿಗೆ ದುಃಖ ಸಹಿಸುವ ಶಕ್ತಿ ಸಿಗಲಿ. ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ಪದ್ಮರಾಜ್ ಪೂಜಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು