11:42 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Suratkal | ಸ್ಥಗಿತಗೊಂಡಿರುವ ಬಡವರ ವಸತಿ ಸಂಕೀರ್ಣ ಪೂರ್ಣಗೊಳಿಸಲು ಒತ್ತಾಯಿಸಿ ಸಿಪಿಎಂ, ಡಿವೈಎಫ್ಐ ಪ್ರತಿಭಟನೆ

24/04/2025, 10:30

ಸುರತ್ಕಲ್(reporterkarnataka.com) : ಸ್ಥಳೀಯ ಶಾಸಕರು, ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಇಡ್ಯಾ ವಾರ್ಡಿನಲ್ಲಿ ಬಡವರಿಗಾಗಿ ನಿರ್ಮಿಸಲಾಗುತ್ತಿದ್ದ 600 ಮನೆಗಳುಳ್ಳ ವಸತಿ ಯೋಜನೆ ಸ್ಥಗಿತಗೊಂಡಿದೆ ಎಂದು ಆರೋಪಿಸಿ ಸಿಪಿಎಂ ಮತ್ತು ಡಿವೈಎಫ್ಐ ವಲಯ ಸಮಿತಿ ನೇತೃತ್ವದಲ್ಲಿ ಜನತಾ ಕಾಲನಿಯ ಸ್ಥಗಿತಗೊಂಡಿರುವ ವಸತಿ ಸಮುಚ್ಚಯದ ಎದುರು ಪ್ರತಿಭಟನೆ ನಡೆಯಿತು.
ಪ್ರತಿಭಟನೆ ಉದ್ದೇಶಿಸಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಮಾತನಾಡಿ, ಮಂಗಳೂರು ನಗರ ಪಾಲಿಕೆಯೊಳಗೆ ಸುಮಾರು ಹದಿನೈದು ಸಾವಿರಕ್ಕೂ ಹೆಚ್ಚು ಮನೆ, ನಿವೇಶನ ರಹಿತ ಬಡವರಿದ್ದಾರೆ. ನಗರ ಪಾಲಿಕೆ ಬಡವರಿಗೆ ನಿವೇಶನ ವಿತರಿಸಲು ಪಾಲಿಕೆಯಲ್ಲಿ ಯಾವುದೇ ಯೋಜನೆಯಿಲ್ಲ. ಇರುವಂಥ ಒಂದು ಜಿ+4 ವಸತಿ ಸಮುಚ್ಚಯ ಜನಪ್ರತಿನಿದಿಗಳ ಇಚ್ಛಾಶಕ್ತಿಯ ಕೊರತೆಯಿಂದಾಗಿ ಯೋಜನೆ ನೆನೆಗುದಿಗೆ ಬಿದ್ದಿದೆ. ಶ್ರೀಮಂತ ಬಿಲ್ಡರುಗಳ ವಸತಿ ಸಂಕೀರ್ಣದ ಭೂಮಿ ಪೂಜೆಗೆ ಹೋಗುವ ಶಾಸಕರುಗಳು ಕಳೆದ 25 ವರ್ಷಗಳಿಂದ ಬಡವರಿಗೆ ವಸತಿ ಸೌಕರ್ಯಗಳು ದೊರಕಿಸಿಕೊಡಲು ವಿಫಲರಾಗಿದ್ದಾರೆ ಎಂದು ಟೀಕಿಸಿದರು.
ಮಾಜಿ ಪಾಲಿಕೆ ಸದಸ್ಯ ದಯಾನಂದ ಶೆಟ್ಟಿ ಮಾತನಾಡಿ, ಜನರಿಗೆ ವಸತಿ ನೀಡುವುದು ಭಿಕ್ಷೆಯಲ್ಲ ಸಂವಿಧಾನಬದ್ದ ಹಕ್ಕಾಗಿದೆ. ನಗರಪಾಲಿಕೆ ವ್ಯಾಪ್ತಿಯೊಳಗಿನ ನಿವೇಶನ ರಹಿತರ ಸಮಸ್ಯೆ ಗಂಭೀರವಾಗಿದೆ ಶಾಸಕರ ನೇತೃತ್ವದ ಆಶ್ರಯ ಸಮಿತಿ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ. ಎಂದು ಆರೋಪಿಸಿದರು.
ಸಿಪಿಎಂ ದಕ್ಷಿಣ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಮಾತನಾಡುತ್ತಾ ನಗರಪಾಲಿಕೆ ವ್ಯಾಪ್ತಿಯ ಎಲ್ಲಾ ನಿವೇಶನ ರಹಿತರನ್ನು ಸಂಘಟಿಸಿ ಪಾಲಿಕೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಸಿಪಿಎಂ ಮುಖಂಡರಾದ ಶ್ರೀನಾಥ್ ಕುಲಾಲ್, ಐ. ಮೊಹಮ್ಮದ್, ಸಲೀಮ್ ಶಾಡೋ, ಡಿವೈಎಫ್ಐ ಮುಖಂಡರಾದ ಬಿ.ಕೆ. ಮಕ್ಸೂದ್, ನವಾಜ್ ಕುಲಾಯಿ, ಇಲ್ಯಾಸ್ ಕೃಷ್ಣಾಪುರ, ಇಮ್ತಿಯಾಜ್ ಕುಳಾಯಿ, ಹನೀಫ್ ಕುಳಾಯಿ, ಸಾದಿಕ್ ಕಿಲ್ಪಾಡಿ,ಆಟೋ ರಿಕ್ಷಾ ಚಾಲಕರ ಸಂಘದ ಮುಖಂಡರಾದ ಲಕ್ಷ್ಮೀಶ್ ಅಂಚನ್, ಬಷೀರ್ ಕಾನ, ನಿವೇಶನ ರಹಿತರ ಹೋರಾಟ ಸಮಿತಿಯ ಮುಖಂಡರಾದ ಬಾಲಾಕೃಷ್ಣ ಕುಳಾಯಿ, ಭವ್ಯ ಪಂಜಿಮೊಗರು, ಜೈನಾಬು, ದಿಲ್ ದಾರ್, ಹಸೀನಾ, ನೌಸೀನ, ಮರಿಯಮ್ಮ, ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು